ಎಸ್‌ಸಿ ಪಟ್ಟಿಗೆ ಸೇರ್ಪಡೆಗೆ ನಿರ್ಧರಿಸಿರುವ ಒಬಿಸಿಗಳಿಗೆ ಹೊಸದಾಗಿ ಜಾತಿ ಪ್ರಮಾಣಪತ್ರ ನೀಡದಂತೆ ನಿರ್ದೇಶ

Update: 2017-01-24 14:34 GMT

ಅಲಹಾಬಾದ್,ಜ.24: ರಾಜ್ಯ ಸಂಪುಟವು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸಲು ಕಳೆದ ತಿಂಗಳು ನಿರ್ಧರಿಸಿರುವ 17 ಇತರ ಹಿಂದುಳಿದ ವರ್ಗಗಳಿಗೆ ಸೇರಿದವರಿಗೆ ಹೊಸದಾಗಿ ಜಾತಿ ಪ್ರಮಾಣಪತ್ರಗಳನ್ನು ನೀಡದಂತೆ ಅಲಹಾಬಾದ್ ಉಚ್ಚ ನ್ಯಾಯಾಲಯವು ಮಂಗಳವಾರ ಉತ್ತರ ಪ್ರದೇಶ ಸರಕಾರಕ್ಕೆ ನಿರ್ದೇಶ ನೀಡಿದೆ.

ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಗೋರಖಪುರದ ಡಾ.ಅಂಬೇಡ್ಕರ್ ಗ್ರಂಥಾಲಯ ಏವಂ ಜನ ಕಲ್ಯಾಣ ಸಮಿತಿಯು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಡಿ.ಬಿ.ಭೋಸ್ಲೆ ಮತ್ತು ನ್ಯಾ.ಯಶವಂತ ವರ್ಮಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶವನ್ನು ಹೊರಡಿಸಿತು.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮತಗಳಿಕೆಯ ಮೇಲೆ ಕಣ್ಣಿಟ್ಟು ಸರಕಾರವು ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News