ಆಕಾಶವಾಣಿ ಮುಖ್ಯಸ್ಥೆಯಾಗಿ ಅಧಿಕಾರ ಸ್ವೀಕಾರ

Update: 2017-01-25 18:37 GMT

ಮಂಗಳೂರು, ಜ.25: ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥೆಯಾಗಿ ಸಹಾಯಕ ನಿರ್ದೇಶಕಿ ಎಸ್. ಉಷಾಲತಾ ಅಧಿಕಾರ ಸ್ವೀಕರಿಸಿದ್ದಾರೆ.

ಚಿತ್ರದುರ್ಗ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾಗಿದ್ದ ಅವರು ವರ್ಗಾವಣೆಯಾಗಿ ಮಂಗಳೂರಿಗೆ ಆಗಮಿಸಿದ್ದರು.

ಈ ಹಿಂದೆ ಭದ್ರಾವತಿ, ಹಾಸನ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿದ್ದ ಉಷಾಲತಾ ಮೂಲತ: ಬಂಟ್ವಾಳ ತಾಲೂಕಿನ ಸರಪಾಡಿ ನಿವಾಸಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News