ರಸ್ತೆ ಅಪಘಾತ: ಪಾದಚಾರಿ ಮೃತ್ಯು

Update: 2017-01-26 19:03 GMT

ಕಾಪು, ಜ.26: ಯೇಣಗುಡ್ಡೆ ಗ್ರಾಮದ ಾರೆಸ್ಟ್ ಗೇಟ್ ಬಳಿ ರಾ.ಹೆದ್ದಾರಿ 66ರಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ರಘುನಾಥ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಜ.22ರಂದು ಬೆಳಗ್ಗೆ 6 ಗಂಟೆಗೆ ರಸ್ತೆ ಬದಿ ನಡೆದುಕೊಂಡು ಹೋಗುತಿದ್ದಾಗ ಈ ಘಟನೆ ನಡೆದಿದೆ. ಕೂಡಲೇ ಅವರನ್ನು ಮಣಿಪಾಲ ಕೆಎಂಸಿಗೆ ಸೇರಿಸಿದರೂ ಚಿಕಿತ್ಸೆ ಲಕಾರಿಯಾಗದೆ ಬುಧವಾರ ಅಪರಾಹ್ನ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News