ಜ.30: ಉಚಿತ ಕನ್ನಡಕ ವಿತರಣೆ
Update: 2017-01-28 20:46 IST
ಉಡುಪಿ, ಜ.28: ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ ಶಾಖೆ, ಲಯನೆಸ್ ಮತ್ತು ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್, ಲಯನೆಸ್ ಮತ್ತು ಲಯನ್ಸ್ ಕ್ಲಬ್ ನೀರೆಬೈಲೂರು ಇವರ ಸಂಯುಕ ಆಶ್ರಯದಲ್ಲಿ ಬೈಲೂರು ಕಾರ್ಕಳದಲ್ಲಿ ಗುರುತಿಸಲಾದ ಅರ್ಹ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಜ.30ರಂದು ಬೆಳಗ್ಗೆ 10 ಗಂಟೆಗೆ ಅನಂತಮತಿ ಹಿರಿಯ ಪ್ರಾಥಮಿಕ ಶಾಲೆ ಯರ್ಲಪಾಡಿ, ಕಾರ್ಕಳ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ರೆಡ್ಕ್ರಾಸ್ ಸಂಸ್ಥೆ ರಾಜ್ಯ ಶಾಖೆಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಡಾ. ಉಮೇಶ್ ಪ್ರಭು, ಉದಯ ಕುಮಾರ್ ಕೆ.ಎಸ್. ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.