ಕೃಷ್ಣಾಪುರ: ರಕ್ತದಾನ ಶಿಬಿರ
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಅಲ್-ಹುನೈನ್ ಅಸೋಷಿಯೇಶನ್(ರಿ) ಕೃಷ್ಣಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇವರ ಸಹಯೋಗದೊಂದಿಗೆ ಕೃಷ್ಣಾಪುರದ ಸರಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವು ಇತ್ತೀಚೆಗೆ ನಡೆಯಿತು.
ಶಾಸಕ ಮೊಯ್ದೀನ್ ಬಾವ ಬ್ಲಡ್ ಹೆಲ್ಪ್ ಲೈನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಶಿಬಿರದಲ್ಲಿ ಇನ್ನೂರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು, 123 ಯುನಿಟ್ ರಕ್ತವನ್ನು ಶೇಕರಿಸಲಾಯಿತು.
ಈ ಸಂದಭರ್ದಲ್ಲಿ ಕೃಷ್ಣಾಪುರ ಮಿಸ್ಬಾ ವುಮೆನ್ಸ್ ಕಾಲೇಜು ಅಧ್ಯಕ್ಷ ಮಮ್ತಾಝ್ ಅಲಿ ಕಾರ್ಪೊರೇಟರ್ ಪಿ.ಎಮ್.ಉಸ್ಮಾನ್ ಅಯಾಝ್,
ಅಲ್-ಹುನೈನ್ ಅಸೋಸಿಯೆಶನ್ ಅಧ್ಯಕ್ಷ- ಇಫ್ತಿಕಾರ್, ಅಬೂಬಕರ್ ಟಿ.ಎಮ್.ಇಕ್ಬಾಲ್ ಕೆನರಾ, ಬ್ಲಡ್ ಹೆಲ್ಪ್ ಲೈನ್ ಸ್ಥಾಪಕಾಧ್ಯಕ್ಷ ನಿಸಾರ್ ದಮ್ಮಾಮ್ ಉಳ್ಳಾಲ,ಮುಸ್ತಫಾ ಅಡ್ಡೂರು ದೆಮ್ಮಲೆ, ಶೇಖ್ ಫಯಾಝ್ ಬೈಂದೂರು,ಕೆ.ಎ.ಮೊಹಮ್ಮದ್ ಅಶ್ರಫ್ ಸಖಾಫಿ, ಹಕೀಂ ಪಾಲ್ಕನ್,ಮೊಹಮ್ಮದ್ ಇಸ್ಮಾಯಿಲ್ ಕಬೀರ್ ಚೊಕ್ಕಬೆಟ್ಟು, ಉಸ್ಮಾನ್ ಪ್ಯಾರಡೈಸ್,ಬಶೀರ್ ಕೃಷ್ಣಾಪುರ,ಶಾಫಿ,ಸತ್ತಾರ್ ಹಾಗೂ ಮತ್ತಿತರರು ಶಿಬಿರದಲ್ಲಿ ಭಾಗವಹಿಸಿದರು.