ಕಾರು ಢಿಕ್ಕಿ: ಮಹಿಳೆ ಮೃತ್ಯು; ಮೂವರು ಗಾಯ

Update: 2017-02-01 18:12 GMT

ಕಾಸರಗೋಡು, ೆ.1: ಬಸ್‌ಗಾಗಿ ಕಾಯುತ್ತಿದ್ದವರ ಮೇಲೆ ನಿಯಂತ್ರಣ ತಪ್ಪಿದ ಕಾರು ಢಿಕ್ಕಿ ಹೊಡೆದು ಓರ್ವ ಮಹಿಳೆ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಜೆ ಬೇಕಲ ಠಾಣಾ ವ್ಯಾಪ್ತಿಯ ಚೇಟುಕುಂಡುನಲ್ಲಿ ನಡೆದಿದೆ.

ಮೃತಪಟ್ಟವರನ್ನು ಚೇಟುಕುಂಡುವಿನ ಕುಂಞಿಷಿಯಾ(65) ಎಂದು ಗುರುತಿಸಲಾಗಿದೆ.

ಗಾಯಗೊಂಡ ಶಂಸಾದ್(40), ಬೇಬಿ(40) ಸೇರಿದಂತೆ ಮೂವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಬುಧವಾರ ಸಂಜೆ ಕಾಞಂಗಾಡ್ ಕಾಸರಗೋಡು ರಾಜ್ಯ ಹೆದ್ದಾರಿಯ ಚೇಟುಕುಂಡು ಜಂಕ್ಷನ್ ಬಳಿ ಅಪಘಾತ ನಡೆದಿದ್ದು, ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಅತೀ ವೇಗದಿಂದ ಬಂದ ಕಾರು ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದರೂ ಕುಂಞಿಷಿಯಾ ಮೃತಪಟ್ಟಿದ್ದಾರೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News