ನಾಳೆ ಪ್ರವಾದಿ ಅಭಿಯಾನ ಸಮಾರೋಪ

Update: 2017-02-01 18:18 GMT

ಮಂಗಳೂರು, ಫೆ.1: ಭಾರತದಲ್ಲಿ ನಾಗರಿಕ ಕಾನೂನು ಹಾಗೂ ಸಾಮಾಜಿಕ ನ್ಯಾಯ ಮತ್ತು ಪ್ರವಾದಿ ಮುಹಮ್ಮದ್ (ಸ) ಎಂಬ ಕೇಂದ್ರೀಯ ವಿಷಯದಲ್ಲಿ ಯುನಿವ್ೆ ಕರ್ನಾಟಕ ವತಿಯಿಂದ ನಡೆಯುತ್ತಿರುವ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನದ ಸಮಾರೋಪ ೆ.3ರಂದು ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಅಭಿಯಾನ ಸಂಚಾಲಕ ಸಲೀಮ್ ಮಲಾರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

 ಪ್ರಥಮ ಅಧಿವೇಶನದಲ್ಲಿ ಸಂಜೆ 4:30ರಿಂದ 6:30ರವರೆಗೆ ಮಹಿಳಾ ಸಮಾವೇಶ ಆಯೋಜಿಸಲಾಗಿದೆ. ‘ಶರೀಅತ್, ರಸೂಲ್ ಔರ್ ಔರತ್’ ಮತ್ತು ‘ಮಹಿಳೆಯರ ಹೊಣೆಗಾರಿಕೆಗಳು’ ಎಂಬ ವಿಷಯದಲ್ಲಿ ಉಪನ್ಯಾಸ ನಡೆಯಲಿದೆ. ದ್ವಿತೀಯ ಅಧಿವೇಶನ ಸಮಾರೋಪ ಸಮಾರಂಭವಾಗಿದ್ದು, 6:30ರಿಂದ 9ರವರೆಗೆ ‘ನಾಗರಿಕ ಕಾನೂನು ಹಾಗೂ ಸಾಮಾಜಿಕ ನ್ಯಾಯ ಮತ್ತು ಪ್ರವಾದಿ (ಸ)’ ವಿಷಯದಲ್ಲಿ ಉಪನ್ಯಾಸವಿದೆ. ಯುನಿವೆಫ್ ರಾಜ್ಯಾಧ್ಯಕ್ಷ ರಫೀಉದ್ದೀನ್ ಕುದ್ರೋಳಿ ರಚಿಸಿದ ‘ಮನುಕುಲದ ಪ್ರವಾದಿ ಹ.ಮುಹಮ್ಮದ್ (ಸ)’ ಪುಸ್ತಕವನ್ನು ಈ ವೇಳೆ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.

  ಸುದ್ದಿಗೋಷ್ಠಿಯಲ್ಲಿ ಯುನಿವೆಫ್ ರಾಜ್ಯ ಕಾರ್ಯದರ್ಶಿ ಯು.ಕೆ.ಖಾಲಿದ್, ಉಳ್ಳಾಲ ಶಾಖಾ ಸದಸ್ಯ ಸಬೀಲ್ ಅಹ್ಮದ್, ಬೆಂಗರೆ ಶಾಖಾ ಸಂಚಾಲಕ ಇ್ರಾಝ್ ಹಸನ್, ಕುದ್ರೋಳಿ ಶಾಖಾ ಸದಸ್ಯ ಅಬ್ದುರ್ರಹ್ಮಾನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News