ಸಚಿವರ ದ.ಕ. ಜಿಲ್ಲಾ ಪ್ರವಾಸ

Update: 2017-02-01 18:24 GMT

 *ರಮಾನಾಥ ರೈ

ಮಂಗಳೂರು, ಫೆ.1: ಅರಣ್ಯ ಸಚಿವ ಬಿ.ರಮಾನಾಥ ರೈ ೆ.2ರಂದು ಬೆಳಗ್ಗೆ ಬಂಟ್ವಾಳ ಸ್ಥಳೀಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅಪರಾಹ್ನ 3 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ಶಿಕ್ಷಕರ ತರಬೇತಿ ಕಾರ್ಯಕ್ರಮದಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 4:30ಕ್ಕೆ ಮಂಗಳೂರು ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ವಿಶೇಷ ಅನುದಾನ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

 *ಆರ್.ರೋಷನ್

ನಗರಾಭಿವೃದ್ಧಿ ಹಾಗೂ ಹಜ್ ಸಚಿವ ಆರ್.ರೋಷನ್ ಬೇಗ್ ೆ.2ರಂದು ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, ವಾಸ್ತವ್ಯ ಹೂಡಲಿದ್ದಾರೆ. ೆ.3ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಓಶಿಯನ್ ಪರ್ಲ್‌ನಲ್ಲಿ ಸ್ಮಾರ್ಟ್ ಸಿಟಿ ಕುರಿತು ಆಯೋಜಿಸಿರುವ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ಅಪರಾಹ್ನ 2:30ಕ್ಕೆ ಉಡುಪಿಗೆ ತೆರಳಲಿದ್ದಾರೆ. ೆ.4ರಂದು ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಕುರಿತು ಆಯೋಜಿಸಿರುವ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8:45ಕ್ಕೆ ವಿಮಾನದ ಮೂಲಕ ಬೆಂಗಳೂರು ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News