ಮಂಗಳೂರು: ಬೈಕ್ ಕಳವು; ಇಬ್ಬರ ಬಂಧನ

Update: 2017-02-03 19:01 GMT

ಮಂಗಳೂರು, ೆ. 3: ಗದಗ ಜಿಲ್ಲೆಯ ಲಕ್ಷ್ಮೇಶ್ವರ ನಗರದಿಂದ ಕಳವು ಮಾಡಿದ ಬೈಕನ್ನು ಮಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬರ್ಕೆ ಠಾಣಾ ಪೊಲೀಸರು ಬಂಸಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿ ಗ್ರಾಮದ ಪರಸಾಪುರ ಗ್ರಾಮದ ನಿವಾಸಿಗಳಾದ ಸುರೇಶ್ ಭಜಂತ್ರಿ (21) ಹಾಗೂ ಕಿರೇಶ್ ಈಳಿಗೇರ(23) ಬಂತ ಆರೋಪಿಗಳು. ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಆರೋಪಿಗಳು ಬೈಕ್ ಬಳಿ ನಿಂತಿದ್ದಾಗ ಪೊಲೀಸರು ಅವರ ಬಳಿ ತೆರಳಿದ್ದ ಸಂದರ್ಭದಲ್ಲಿ ಅವರು ಓಡಿ ಹೋಗಲು

ಯತ್ನಿಸಿದ್ದಾರೆ. ಬೈಕ್ ಬಗ್ಗೆ ವಿಚಾರಿಸಿದಾಗ ಗದಗ ಜಿಲ್ಲೆಯ ಲಕ್ಷ್ಮೇಶ್ವರ ನಗರದಲ್ಲಿರುವ ದಯಾ ವೈನ್ ಶಾಪ್ ಬಳಿಯಿಂದ ಕಳವು ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಬೈಕ್‌ನ ನೋಂದಣಿ ಸಂಖ್ಯೆಯನ್ನು ಬದಲಾಯಿಸಿ ಅಲ್ಲಿಂದ ಚಲಾಯಿಸಿಕೊಂಡು ಬಂದು ಮಾರಾಟಕ್ಕೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಸಿಪಿ ಉದಯ ನಾಯಕ್, ಬರ್ಕೆ ಇನ್‌ಸ್ಪೆಕ್ಟರ್ ರಾಜೇಶ್ ಎ.ಕೆ., ಪಿಎಸ್ಸೆ ನರೇಂದ್ರ, ಎಎಸ್ಸೆ ಪ್ರಕಾಶ್ ರೈ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News