ಇಬ್ಬರು ಬಾಲಕರ ಸಹಿತ ನಾಲ್ವರ ಬಂಧನ

Update: 2017-02-03 19:02 GMT

ಉಡುಪಿ, ೆ.3: ಬಾರ್ಕೂರು ಮಸ್ಕಿಬೈಲು ಎಂಬಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಸಿದಂತೆ ಇಬ್ಬರು ಬಾಲಕರು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಶುಕ್ರವಾರ ಉಡುಪಿ ಡಿಸಿಐಬಿ ಪೊಲೀಸರು ಬಂಸಿದ್ದಾರೆ.

ಬಂತರನ್ನು ಸಾಸ್ತಾನ ಗೋಳಿಬೆಟ್ಟುವಿನ ಪ್ರಹ್ಲಾದ ಪೂಜಾರಿ(23), ಸಾಸ್ತಾನದ ಪ್ರಶಾಂತ್ ಜಿ.(24) ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಬಾಲಕರನ್ನು ರಿಮ್ಯಾಂಡ್ ಹೋಮ್‌ಗೆ ಕಳುಹಿಸಲಾಗಿದೆ. ಆರೋಪಿಗಳು ಜ.30ರಂದು ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಕೂರು ಮಸ್ಕಿಬೈಲು ಎಂಬಲ್ಲಿ ಮನೆಯೊಂದರ ಬೀಗ ಮುರಿದು ಒಳನುಗ್ಗಿ ಚಿನ್ನಾಭರಣ ಕಳವು ಮಾಡಿದ್ದರು. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಸಿದ್ದಾರೆ. ಬಂತರಿಂದ ಕಳವು ಮಾಡಲಾಗಿದ್ದ ಚಿನ್ನದ ಸರ, ಬ್ರಾಸ್ಲೆಟ್, ಉಂಗುರ, ಒಂದು ಜೊತೆ ಕಿವಿಗೆ ಧರಿಸುವ ಟಿಕ್ಕಿ, 2,560ರೂ. ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

 19.420 ಗ್ರಾಂ ತೂಕದ ಚಿನ್ನಾಭರಣಗಳ ಒಟ್ಟು ಮೌಲ್ಯ 58,000 ರೂ. ಮತ್ತು ಕಾರಿನ ವೌಲ್ಯ ಐದು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಈ ಹಿಂದೆ ಕೊಟೇಶ್ವರದಲ್ಲಿ ಮಹಿಳೆಯ ಸರ ಅಪರಹರಣಗೈದಿದ್ದ ಪ್ರಹ್ಲಾದ ಪೂಜಾರಿ ತನ್ನ ಮನೆಯಲ್ಲಿಯೇ ಕಳ್ಳತನ ಮಾಡಿದ್ದನು. ಈ ಬಗ್ಗೆ ಕುಂದಾಪುರ ಹಾಗೂ ಕೋಟ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಈ ಎರಡೂ ಪ್ರಕರಣಗಳು ಇದೀಗ ಕುಂದಾಪುರ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಅಲ್ಲದೇ ಪ್ರಶಾಂತ್ ಕೂಡ ಪ್ರಹ್ಲಾದ ಪೂಜಾರಿಯೊಂದಿಗೆ ಸೇರಿ ಕೊಟೇಶ್ವರದಲ್ಲಿ ಮಹಿಳೆಯ ಸರಗಳ್ಳತನ ಮಾಡಿದ್ದನು. ಇವರಿಬ್ಬರೂ ಹಳೆ ಆರೋಪಿಗಳಾಗಿದ್ದಾರೆ.

ಜಿಲ್ಲಾ ಪೊಲೀಸ್ ಅೀಕ್ಷಕ ಕೆ.ಟಿ.ಬಾಲಕೃಷ್ಣ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅೀಕ್ಷಕ ವಿಷ್ಣುವರ್ಧನ ಮತ್ತು ಉಡುಪಿ ಡಿವೈಎಸ್ಪಿ ಕುಮಾರ ಸ್ವಾಮಿ ಮಾರ್ಗದರ್ಶನದಲ್ಲಿ ಡಿಸಿಐಬಿ ನಿರೀಕ್ಷಕ ಸಂಪತ್ ಕುಮಾರ್, ಎಎಸ್ಸೆ ರೊಸಾರಿಯೊ ಡಿಸೋಜ ಆಧುನಿಕ ತಂತ್ರಜ್ಞಾನ ವಿಭಾಗದ ಎಎಸ್ಸೆಅಚ್ಯುತ ಮತ್ತು ಸಿಬ್ಬಂದಿ ರವಿಚಂದ್ರ, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ಸಂತೋಷ ಕುಂದರ್, ಸುರೇಶ ಕೆ., ರಾಘವೇಂದ್ರ ಉಪ್ಪುಂದ, ಪ್ರವೀಣ್, ಶಿವಾನಂದ, ರಾಜ್‌ಕುಮಾರ್, ದಯಾನಂದ ಪ್ರಭು, ಚಾಲಕ ರಾಘವೇಂದ್ರ, ವಿಜಯ ಕುಮಾರ್ ಮತ್ತು ರಮೇಶ ನಾಯ್ಕರವರು ಈ ಕಾರ್ಯಾಚರಣೆಯಲ್ಲಿ ಸಹಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News