ಮೋದಿ ಮೇಲಿನ ಅಭಿಮಾನದಿಂದ ಎಸ್.ಎಂ.ಕೃಷ್ಣ ಬಿಜೆಪಿಗೆ: ಶೆಟ್ಟರ್

Update: 2017-02-04 06:58 GMT

ಹುಬ್ಬಳ್ಳಿ, ಫೆ.4: ಕಾಂಗ್ರೆಸ್ ಪಕ್ಷ ತೊರೆದಿರುವ ಎಸ್.ಎಂ.ಕೃಷ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ಅಭಿಮಾನದಿಂದ ಬಿಜೆಪಿಗೆ ಬರುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೇರಿದ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಗೊಂದಲದ ವಾತಾವರಣ ಮೂಡಿದೆ. ಕಾಂಗ್ರೆಸ್ ಪಕ್ಷದಲ್ಲಿ ಗಂಭೀರ ಸ್ಥಿತಿ ತಲೆದೋರಿದೆ. ಅಲ್ಲದೇ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದ ಬೇಸರದಿಂದ ಹಿರಿಯ ರಾಜಕಾರಣಿಯಾಗಿರುವ ಎಸ್.ಎಂ.ಕೃಷ್ಣ ಆ ಪಕ್ಷ ತೊರೆದಿದ್ದಾರೆ. ಅವರು ಬಿಜೆಪಿಗೆ ಬರುವುದಾದರೆ ನಾವು ಸ್ವಾಗತಿಸುತ್ತೇವೆ. ಅವರ ಬರುವಿಕೆಯಿಂದ ಬಿಜೆಪಿಗೆ ಮತ್ತಷ್ಟು ಬಲ ಬರಲಿದೆ. ಅವರಿಗೆ ಕೊಡಬೇಕಾದ ಸ್ಥಾನಮಾನದ ಬಗ್ಗೆ ಬಿಜೆಪಿ ಚಿಂತನೆ ನಡೆಸಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News