×
Ad

ಹನೀಫ್ ಮನೆಗೆ ಶ್ರೀರಾಮರೆಡ್ಡಿ ಭೇಟಿ

Update: 2017-02-06 21:17 IST

ಉಡುಪಿ, ಫೆ.6: ಇತ್ತೀಚೆಗೆ ಹಿಂದು ಜಾಗರಣಾ ವೇದಿಕೆಯ ಕಾರ್ಯ ಕರ್ತನಿಂದ ಕೊಲೆಯಾದ ರಿಕ್ಷಾ ಚಾಲಕ ಹನೀಫ್ ಅವರ ಕೊಡಂಕೂರು ಮನೆಗೆ ಸಿಪಿಎಂ ರಾಜ್ಯ ಕಾರ್ಯದರ್ಶಿ, ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಇಂದು ಭೇಟಿ ನೀಡಿದರು.

ಕುಟುಂಬದಿಂದ ಕೊಲೆಯ ನಂತರದ ಬೆಳವಣಿಗೆಗಳ ಕುರಿತು ಮಾಹಿತಿ ಪಡೆದ ಅವರು, ಹನೀಫ್ ಕೊಲೆಯಲ್ಲಿ ನ್ಯಾಯಕ್ಕಾಗಿ ಧ್ವನಿ ಎತ್ತಿ, ಸರಕಾರದ ಮೇಲೆ ಒತ್ತಡ ಹಾಕುವುದಾಗಿ ಭರವಸೆ ನೀಡಿದರು. ಕುಟುಂಬ ಸದಸ್ಯರಿಗೆ ಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಡಿವೈಎಫ್‌ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಸಿಪಿಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News