ಫೆ.10: ಆ್ಯಗ್ನೆಸ್ ಕಾಲೇಜಿನಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ

Update: 2017-02-08 12:28 GMT

ಮಂಗಳೂರು, ಫೆ.8:ಸಂತ ಆ್ಯಗ್ನೆಸ್ ಕಾಲೇಜಿನ ಕನ್ನಡ ಸಂಘ ಮತ್ತು ಗ್ರಂಥಾಲಯ ವಿಭಾಗಗಳು ಕೇಂದ್ರ ಸಾಹಿತ್ಯ ಅಕಾಡಮಿ ಮತ್ತು ಆಕಾಶವಾಣಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ‘ಆಧುನಿಕ ಕನ್ನಡ ಮಹಿಳಾ ಸಾಹಿತ್ಯ: ಇತ್ತೀಚಿನ ವಿದ್ಯಮಾನಗಳು’ ಎಂಬ ವಿಷಯದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಫೆ.10ರಂದು ಕಾಲೇಜಿನ ಕಾನ್ಫೆರೆನ್ಸ್ ಹಾಲ್‌ನಲ್ಲಿ ನಡೆಯಲಿದೆ.
ಬೆಳಗ್ಗೆ 9:30ಕ್ಕೆ ಸಾಹಿತಿ ವೈದೇಹಿ ವಿಚಾರ ಸಂಕಿರಣ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲೆ ಡಾ. ಎಂ. ಜೆಸ್ವೀನಾ ಎ.ಸಿ. ಅಧ್ಯಕ್ಷತೆ ವಹಿಸುವರು. 10:15ಕ್ಕೆ ವೈದೇಹಿಯೊಂದಿಗೆ ಪ್ರತಿನಿಧಿಗಳ ಸಂವಾದ ನಡೆಯಲಿದೆ. ಪೂ.11ಕ್ಕೆ ಪ್ರಬಂಧ ಮಂಡನೆಯಾಗಲಿದೆ. ಅಪರಾಹ್ನ 1:30ಕ್ಕೆ ಸಮಾರೋಪ ಸಮಾರಂಭ ಜರಗಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News