ಇಂದು ‘ಭಾರತ ಭಾಗ್ಯ ವಿಧಾತ’ ಧ್ವನಿ-ಬೆಳಕು ಕಾರ್ಯಕ್ರಮ

Update: 2017-02-08 18:12 GMT

ಮಂಗಳೂರು, ಫೆ.8: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನೂತನ ಧ್ವನಿ-ಬೆಳಕು ಕಾರ್ಯಕ್ರಮ ‘ಭಾರತ ಭಾಗ್ಯ ವಿಧಾತ’ ಫೆ.9ರಂದು ಸಂಜೆ 7ಕ್ಕೆ ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿದೆ.

ಸಂವಿಧಾನ ಶಿಲ್ಪಿಡಾ. ಬಿ.ಆರ್. ಅಂಬೇಡ್ಕರ್‌ರ 125ನೆ ಜನ್ಮ ದಿನಾಚ ರಣೆಯ ವರ್ಷಾಚರಣೆ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಕಣ್ತುಂಬಿಸುವ ಬೆಳಕಿನ ಲೋಕ, ಕಿವಿದುಂಬಿಸುವ ಹಿನ್ನೆಲೆ ಸಂಗೀತ ದೊಂದಿಗೆ ವೈಚಾರಿಕತೆಯ ಹಿನ್ನೋಟ ಅಡಿಬರಹದಲ್ಲಿ ರೂಪುಗೊಂಡಿರುವ ಈ ವಿಶೇಷ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯುತ್ತಿರುವ ಅಪರೂಪದ ಸಾಂಸ್ಕೃತಿಕ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ ವಾರ್ತಾಕಾರಿಗಳ ಪ್ರಕಟನೆೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News