ಸಾಂತ್ವನ ಕೇಂದ್ರಕ್ಕೆ ಸಮಾಜ ಕಾರ್ಯಕರ್ತೆಯರು ಬೇಕಾಗಿದ್ದಾರೆ

Update: 2017-02-10 15:12 GMT

ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜನಶಿಕ್ಷಣ ಟ್ರಸ್ಟ್‌ನ ಸಹಭಾಗಿತ್ವದಲ್ಲಿ ಶೀಘ್ರದಲ್ಲಿ ಆರಂಭಿಸಲಾಗುವ ದಿನದ 24 ಗಂಟೆಯೂ ಕಾರ್ಯನಿರ್ವಸಲಿರುವ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕ್ಕೆ ಓರ್ವ ಮಹಿಳಾ ಕೌಟುಂಬಿಕ ಸಲಹೆಗಾರರು, ಇಬ್ಬರು ಮಹಿಳಾ ಸಮಾಜ ಕಾರ್ಯಕರ್ತರು ಹಾಗೂ ಒಬ್ಬರು ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸಲು ಪುರುಷ ಸಮಾಜ ಕಾರ್ಯಕರ್ತರು ಬೇಕಾಗಿದ್ದಾರೆ.

ಸಮಾಜ ಕಾರ್ಯ ಅಥವಾ ಮನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಕೌಟುಂಬಿಕ ಸಲಹೆಗಾರರ ಹುದ್ದೆಗೆ ಹಾಗೂ ಪಿಯುಸಿ ವಿದ್ಯಾರ್ಹತೆ ಹೊಂದಿರುವವರು ಸಮಾಜ ಕಾರ್ಯಕರ್ತರ ಹುದ್ದೆಗೆ ಫೆ.15ರೊಳಗೆ ಅರ್ಜಿ ಸಲ್ಲಿಸಬಹುದು.

ಸಮಾಜ ಸೇವೆಯಲ್ಲಿ ಆಸಕ್ತಿ ಹಾಗೂ ಅನುಭವ ಹೊಂದಿರುವ, ಗೌರವಧನದ ಆಧಾರದಲ್ಲಿ ಕೆಲಸ ಮಾಡಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದು. ನಿರ್ದೇಶಕರು, ಜನ ಶಿಕ್ಷಣ ಟ್ರಸ್ಟ್ ಪಂಪುವೆಲ್ ಹತ್ತಿರ, ಕಂಕನಾಡಿ, ಮಂಗಳೂರು - 575002. ದೂರವಾಣಿ:9449642137 ಈಮೆಲ್ :Janastrust@yahoo.com  ಜನಶಿಕ್ಷಣ ಟ್ರಸ್ಟ್‌ನ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News