×
Ad

ಮಂಗಳೂರು ವಿವಿ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಧರಣಿ

Update: 2017-02-11 23:42 IST

ಉಡುಪಿ, ೆ.11: ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಉಡುಪಿ ಜಿಲ್ಲಾ ಘಟಕ ಶನಿವಾರ ಉಡುಪಿ ಎಂಜಿಎಂ ಕಾಲೇಜು ಎದುರು ಪ್ರತಿಭಟನೆ ನಡೆಸಿತು.

ಮಂಗಳೂರು ವಿವಿಯ ಅೀನದಲ್ಲಿರುವ ಹಲವು ಕಾಲೇಜು ವಿದ್ಯಾರ್ಥಿಗಳಿಗೆ ಕಳೆದ 3ವರ್ಷಗಳಿಂದ ಮಾರ್ಕ್ಸ್‌ಕಾರ್ಡ್ ಮತ್ತು ಲಿತಾಂಶಕ್ಕೆ ಸಂಬಂಸಿದಂತೆ ಸಮಸ್ಯೆಗಳು ಅನೇಕ ಎದುರಾಗುತ್ತಿದ್ದು, ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳದೆ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟ ಆಡಲಾಗುತ್ತಿದೆ. ಆದುದರಿಂದ ಈ ಸಮಸ್ಯೆಯನ್ನು 1ವಾರದೊಳಗೆ ಪರಿಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

 ವಿವಿಯಲ್ಲಿ ನಡೆಯುತ್ತಿರುವ ಇಂತಹ ಗೊಂದಲದ ಬಗ್ಗೆ ರಾಜ್ಯಪಾಲರು ಹಾಗೂ ಸರಕಾರ ಉನ್ನತಮಟ್ಟದ ತನಿಖೆ ನಡೆಸಬೇಕು. ಇಂತಹ ಗೊಂದಲ ಸೃಷ್ಟಿಸುವವರು ಕೂಡಲೇ ರಾಜಿನಾಮೆ ನೀಡಬೇಕು. ಇಲ್ಲವಾದರೆ ಬೃಹತ್ ಹೋರಾಟದ ಮೂಲಕ ವಿವಿಗೆ ಮುತ್ತಿಗೆ ಹಾಕಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಣಿಪಾಲದ ಎಂಪಿಎಂಸಿ, ಉಡುಪಿಯ ಪಿಪಿಸಿ, ಎಂಜಿಎಂ ಮತ್ತಿತ್ತರ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಎಬಿವಿಪಿ ಮುಖಂಡ ಅನೂಪ್, ಪ್ರಣತಿ ಮಾತನಾಡಿದರು. ನಿಖಿಲ್, ಎಬಿವಿಪಿ ಸಂತೋಷ್, ಶೈಲೇಶ್, ಸುಭೋದ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News