ಪತ್ರಕರ್ತರ ಕ್ರೀಡಾಕೂಟದ ಬಹುಮಾನ ವಿತರಣೆ

Update: 2017-02-12 13:04 GMT

ಉಡುಪಿ, ಫೆ.12: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣಾ ಸಮಾರಂಭವು ಶನಿವಾರ ಉಡುಪಿ ಕಡಿಯಾಳಿ ಓಶಿಯನ್ ಪರ್ಲ್ಹೊಟೇಲ್ ಸಭಾಂಗಣದಲ್ಲಿ ಜರಗಿತು.

 ಮುಖ್ಯ ಅತಿಥಿಗಳಾಗಿ ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ವಾಲಿ ಬಾಲ್ ಆಟಗಾರ ಅನುಪ್ ಡಿಕೋಸ್ತ, ವಾರ್ತಾಧಿಕಾರಿ ಕೆ.ರೋಹಿಣಿ, ನೇತ್ರತಜ್ಞ ಡಾ.ಕೃಷ್ಣಪ್ರಸಾದ್, ಉಡುಪಿ ಧರ್ಮ ಪ್ರಾಂತ್ಯದ ಕುಲಪತಿ ವಂ.ವಲೇರಿಯನ್ ಮೆಂಡೋನ್ಸಾ, ಉಡುಪಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಟೋರ್ ಹೆಡ್ ಹಫೀಝ್, ಓಶಿಯನ್ ಪರ್ಲ್ ಹೊಟೇಲಿನ ಜನರಲ್ ಮೆನೇಜರ್ ಬಿಜು ವರ್ಗಿಸ್ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಿದರು.

  ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಜಯಕರ ಸುವರ್ಣ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಗಣೇಶ್ ಪ್ರಸಾದ್ ಪಾಂಡೇಲು ಸ್ವಾಗತಿಸಿದರು. ಕ್ರೀಡಾ ಕಾರ್ಯದರ್ಶಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಉಡುಪಿ ಪ್ರೆಸ್‌ಕ್ಲಬ್ ಸಂಚಾಲಕ ಚೇತನ್ ಪಡುಬಿದ್ರಿ ಉಪಸ್ಥಿತರಿದ್ದರು. ಕೋಶಾಧಿ ಕಾರಿ ರಾಜೇಶ್ ಶೆಟ್ಟಿ ವಂದಿಸಿದರು. ನಾಗರಾಜ್ ಕಾರ್ಯಕ್ರಮ ನಿರೂಪಿಸಿ ದರು. ಬಳಿಕ ವಿವಿಧ ಮನರಂಜನಾ ಕಾರ್ಯಕ್ರಮಗಳು ಜರಗಿದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News