ಫೆ.16: ತ್ಯಾಜ್ಯ ವಿಲೇವಾರಿ ಘಟಕದ ಕಟ್ಟಡ ಉದ್ಘಾಟನೆ
Update: 2017-02-13 18:37 GMT
ಉಡುಪಿ, ಫೆ.13: ಕುಂದಾಪುರ ತಾಲೂಕಿನ ಮರವಂತೆ ಗ್ರಾಪಂನ ತ್ಯಾಜ್ಯ ವಿಲೇವಾರಿ ಘಟಕದ ಕಟ್ಟಡ ಉದ್ಘಾಟನಾ ಸಮಾರಂಭ ಫೆ.16ರಂದು ಬೆಳಗ್ಗೆ 10:30ಕ್ಕೆ ಮರವಂತೆ ಗಾಂಧಿನಗರದ ಘನತ್ಯಾಜ್ಯ ಘಟಕದ ವಠಾರದಲ್ಲಿ ನಡೆಯಲಿದೆ.
ಘಟಕವನ್ನು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಉದ್ಘಾಟಿಸುವರು.
ಅಧ್ಯಕ್ಷತೆಯನ್ನು ಮರವಂತೆ ಗ್ರಾಪಂ ಅಧ್ಯಕ್ಷೆ ಅನಿತಾ ಆರ್.ಕೆ. ವಹಿಸುವರು. ಮುಖ್ಯ ಅತಿಥಿಗಳಾಗಿ ಕುಂದಾಪುರ ತಾಪಂ ಅಧ್ಯಕ್ಷೆ ಜಯಶ್ರೀ ಮೊಗವೀರ, ಜಿಪಂ ಸದಸ್ಯ ಬಾಬು ಹೆಗ್ಡೆ, ತಾಪಂ ಸದಸ್ಯ ಜಗದೀಶ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಇಒ ಚೆನ್ನಪ್ಪ ಮೊಯಿಲಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.