ಮಹದಾಯಿ ಹೋರಾಟಗಾರರ ಮೇಲಿನ ಕೇಸ್ ವಾಪಸ್
Update: 2017-02-15 20:43 IST
ಬೆಂಗಳೂರು, ಫೆ.16: ಮಹಾದಾಯಿ ಹೋರಾಟಗಾರರ ಮೇಲೆ ಹಾಕಿದ್ದ 94 ಕೇಸ್ ಗಳನ್ನು ರಾಜ್ಯ ಸರಕಾರ ಹಿಂಪಡೆಯಲು ನಿರ್ಧರಿಸಿದೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಜೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಇದೇ ವೇಳೆ ಬಹುನಿರೀಕ್ಷಿತ ಮೇಕೆದಾಟು ಯೋಜನೆಗೆ ಸಭೆ ತಾತ್ವಿಕವಾಗಿ ಒಪ್ಪಿಗೆ ನೀಡಿದೆ.