ಮಂಗಳೂರು: ಶಾಸಕರ 15 ಲಕ್ಷ ರೂ. ಅನುದಾನ ಬಿಡುಗಡೆ

Update: 2017-02-18 14:45 GMT

ಮಂಗಳೂರು, ಫೆ.18: ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಾಸಕ ಬಿ. ರಮಾನಾಥ ರೈಯ 2016-17ನೆ ಸಾಲಿನ ಅನುದಾನದಲ್ಲಿ ಅಮ್ಟಾಡಿ ಗ್ರಾಮದ ಪ್ರೀತೇಶ್ ಹೊಟೇಲ್ ಹಿಂಬದಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ 5 ಲಕ್ಷ ರೂ., ಅಮ್ಮುಂಜೆ ಗ್ರಾಮದ ಮೂಡಾಯಿಕೋಡಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ 5 ಲಕ್ಷ ರೂ., ಸಜಿಪ ಮುನ್ನೂರು ಗ್ರಾಮದ ನಂದಾವರ ಶಾಲಾ ಬಳಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ 5ಲಕ್ಷ ರೂ. ಅನುದಾನವನ್ನು ಮಂಜೂರುಗೊಳಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News