ಮೂರು ತಿಂಗಳ ಹಿಂದೆ ನಾಪತ್ತೆಯಾದವನ ಶವ ಪತ್ತೆ

Update: 2017-02-18 15:17 GMT

ಬಂಟ್ವಾಳ, ಫೆ. 18: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಪುತ್ತೂರಿನ ರವೀಂದ್ರ ಆಚಾರ್ಯ(40) ಎಂಬವರ ಮೃತದೇಹ ಶನಿವಾರ ಬಿ.ಸಿ.ರೋಡು ನೇತ್ರಾವತಿ ನದಿ ಕಿನಾರೆಯಲ್ಲಿ ಪತ್ತೆಯಾಗಿದೆ.

ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಶವವೊಂದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹದಲ್ಲಿದ್ದ ಕುರುಹುಗಳ ಮೂಲಕ ಹುಡುಕಾಟ ನಡೆಸಿದಾಗ ಮೃತರ ವಿಳಾಸ ಪತ್ತೆಯಾಗಿದೆ.

ಮಂಗಳೂರಿನಲ್ಲಿ ವಾಸಿಸುತ್ತಿದ್ದ ರವೀಂದ್ರ ಆಚಾರ್ಯ ಪುತ್ತೂರಿನಲ್ಲಿ ಮರದ ಕೆಲಸ ಮಾಡುತ್ತಿದ್ದರು. 2016ರ ನವೆಂಬರ್ 15ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದರು ಎಂದು ಅವರ ಪತ್ನಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ನವೆಂಬರ್ 21ರಂದು ದೂರು ನೀಡಿದ್ದರು.

ಇದೀಗ ಮನೆಯವರು ಬಂದು ಶವವನ್ನು ಗುರುತಿಸಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೊಂದು ಕೊಲೆಯೇ, ಆತ್ಮಹತ್ಯೆ ಎಂಬುದರ ಬಗ್ಗೆ ಶಂಕೆ ವ್ಯಕ್ತವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News