ಜೆಡಿಎಸ್‌ನಲ್ಲಿ ಭುಗಿಲೆದ್ದ ಭಿನ್ನಮತ

Update: 2017-02-23 07:03 GMT

ಬೆಂಗಳೂರು, ಫೆ.23: ಭಿನ್ನಮತದ ಬಿಸಿ ಜಾತ್ಯತೀತ ಜನತಾದಳಕ್ಕೆ ತಟ್ಟಿದೆ. ದೇವನಹಳ್ಳಿಯ ಜೆಡಿಎಸ್ ಶಾಸಕ ಪಿಳ್ಳ ಮುನಿಶಾಮಪ್ಪ ಪಕ್ಷದ ನಿರ್ಧಾರವನ್ನು ವಿರೋಧಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 ಪಕ್ಷಕ್ಕೆ ನಿಸರ್ಗ ನಾರಾಯಣ್ ಸ್ವಾಮಿಯವರನ್ನು ಸೇರ್ಪಡೆಗೊಳಿಸಿರುವುದನ್ನು ವಿರೋಧಿಸಿ ಮುನಿಶಾಮಪ್ಪ ರಾಜೀನಾಮೆ ನೀಡಿದ್ದಾರೆ.

   ಸ್ಪೀಕರ್ ಕೋಳಿವಾಡರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿರುವ ಮುನಿಶಾಮಪ್ಪ ಕೂಡಲೇ ತನ್ನ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ತನ್ನ ನಿರ್ಧಾರವನ್ನು ಮರು ಪರಿಶೀಲಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News