ಬಿಎಂಸಿ ಚುನಾವಣೆ: ಶಿವಸೇನೆ-ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ

Update: 2017-02-23 12:20 GMT

ಮುಂಬೈ,ಫೆ.23: ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಗುರುವಾರ ನಡೆದಿದ್ದು, ವಿವಿಧ ಪಕ್ಷಗಳ ಮುನ್ನಡೆಯ ಮಾಹಿತಿಗಳು ಹೊರಬೀಳುತ್ತಿದ್ದಂತೆ ವಿಜಯದ ಸಂಭ್ರಮಲ್ಲಿದ್ದ ಕೆಲವು ಶಿವಸೇನಾ ಕಾರ್ಯಕರ್ತರು ದಾದರ್‌ನಲ್ಲಿರುವ ಬಿಜೆಪಿ ಕಚೇರಿಯೆದುರು ಪಟಾಕಿಗಳನ್ನು ಸಿಡಿಸಿದ್ದು ವಿವಾದಕ್ಕೆ ಕಾರಣವಾಗಿ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆಯೂ ನಡೆಯಿತು.

 ಉಭಯ ಪಕ್ಷಗಳ ಕಾರ್ಯಕರ್ತರು ಪರಸ್ಪರರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರಿಂದ ಪ್ರದೇಶದಲ್ಲಿ ಕೆಲಕಾಲ ಗೊಂದಲಮಯ ಪರಿಸ್ಥಿತಿ ಸೃಷ್ಟಿಯಾಗಿತ್ತು. ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸರು ಮಧ್ಯೆ ಪ್ರವೇಶಿಸಿ ಶಿವಸೇನೆಯ ಕಾರ್ಯಕರ್ತರನ್ನು ಸ್ಥಳದಿಂದ ತೆರವುಗೊಳಿಸಿದ ಬಳಿಕ ಪರಿಸ್ಥಿತಿ ಸಹಜಗೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News