ಪ್ರವಾಸಿ ಬಸ್ ಪಲ್ಟಿ 15 ತಮಿಳುನಾಡು ವಿದ್ಯಾರ್ಥಿಗಳಿಗೆ ಗಾಯ

Update: 2017-02-24 17:28 GMT

ಮಡಿಕೇರಿ, ಫೆ.24: ತಮಿಳುನಾಡಿನಿಂದ ಪ್ರವಾಸಕ್ಕೆಂದು ಆಗಮಿಸಿದ್ದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ಸೊಂದು ನಗರದ ಅರಣ್ಯ ಭವನದ ತಿರುವಿನಲ್ಲಿ ಪಲ್ಟಿ ಹೊಡೆದು 15 ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶುಕ್ರವಾರ ನಡೆದಿದೆ.


ತಮಿಳುನಾಡಿನ ತಿರುಚಿಯ ಸರಕಾರಿ ಇಂಜಿನಿಯರಿಂಗ್ ಕಾಲೆೇಜಿನ ಸುಮಾರು 50 ವಿದ್ಯಾರ್ಥಿಗಳು ಹಾಗೂ ನಾಲ್ವರು ಉಪನ್ಯಾಸಕರು ಕರ್ನಾಟಕ ಪ್ರವಾಸದ ಸಲುವಾಗಿ ಬೆಂಗಳೂರಿನ ಅತ್ತಿಬೆಲೆಯವರೆಗೆ ತಮಿಳುನಾಡು ಬಸ್‌ನಲ್ಲಿ ಆಗಮಿಸಿ, ನಂತರ ರಾಜ್ಯದ ಖಾಸಗಿ ಬಸ್‌ನಲ್ಲಿ ಮೈಸೂರನ್ನು ವೀಕ್ಷಿಸಿಕೊಂಡು ಇಂದು ಕೊಡಗಿನ ತಲಕಾವೇರಿ ಮತ್ತು ಭಾಗಮಂಡಲ ಕ್ಷೇತ್ರಗಳ ವೀಕ್ಷಣೆಗೆಂದು ಆಗಮಿಸುತ್ತಿದ್ದರು.


ಈ ಸಂದರ್ಭ ಬಸ್ ನಗರದಂಚಿನ ಅರಣ್ಯ ಭವನದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ.

ಇದರಿಂದ ಬಸ್‌ನಲ್ಲಿದ್ದ ಸುಮಾರು 15 ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರಿಗೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News