ನಾಳೆ ಅನುಸ್ಮರಣೆ ಕಾರ್ಯಕ್ರಮ

Update: 2017-02-24 18:42 GMT

 ಬಂಟ್ವಾಳ, ಫೆೆ.24: ಪಾಣೆಮಂಗಳೂರು ನೆಹರೂ ನಗರ ನೂರುಲ್ ಹುದಾ ಯಂಗ್‌ಮೆನ್ಸ್ ಅಸೋಸಿಯೇಶನ್‌ನ 10ನೆ ವಾರ್ಷಿಕೋತ್ಸವದ ಪ್ರಯುಕ್ತ ಅಗಲಿದ ಸಮಸ್ತದ ನೇತಾರರ ಅನುಸ್ಮರಣೆ ಹಾಗೂ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮ ಫೆೆ.26ರಂದು ಸಂಜೆ 7ಕ್ಕೆ ನೆಹರೂ ನಗರ ಶಾಲಾ ಮೈದಾನದ ಮರ್‌ಹೂಂ ಶಂಸುಲ್ ಉಲಮಾ ನಗರದಲ್ಲಿ ನಡೆಯಲಿದೆ. ಸಮಸ್ತ ಕೇರಳ ಜಂಇಯತ್ತುಲ್ ಉಲಮಾದ ಉಪಾಧ್ಯಕ್ಷ ಕೆ.ಪಿ.ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸುವರು. ಸೈಯದ್ ಶಮೀರಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ದುಆ ನೆರವೇರಿಸಲಿದ್ದು, ಹಾಫಿಲ್ ಸಿರಾಜುದ್ದೀನ್ ಅಲ್ ಖಾಸಿಮಿ ಪತ್ತನಾಪುರಂ ಪ್ರವಚನಗೈಯಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News