ಫೆ.28ರಂದು ಸನ್ಮಾನ, ಅಭಿನಂದನಾ ಕಾರ್ಯಕ್ರಮ

Update: 2017-02-24 18:46 GMT

ಮಂಗಳೂರು, ಫೆ.24: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ದಕ್ಷಿಣ ಕರ್ನಾಟಕ ಮುಶಾವರ ಹಾಗೂ ದ.ಕ. ಜಿಲ್ಲಾ ಮದ್ರಸ ಮ್ಯಾನೇಜ್‌ಮೆಂಟ್ ಇವುಗಳ ಆಶ್ರಯದಲ್ಲಿ ಫೆ.28ರಂದು ಬೆಳಗ್ಗೆ 10ಗಂಟೆಗೆ ನಗರದ ಪುರಭವನದಲ್ಲಿ ಕೇಂದ್ರ ಮುಶಾವರದ ನೂತನ ಪದಾಧಿಕಾರಿಗಳಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ದಕ್ಷಿಣ ಕರ್ನಾಟಕ ಮುಶಾವರದ ಸದಸ್ಯ ಅಝೀಝ್ ದಾರಿಮಿ ಚೊಕ್ಕಬೆಟ್ಚು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಮುಶಾವರದ ನೂತನ ಅಧ್ಯಕ್ಷ ಶೈಖುನಾ ಸೈಯದ್ ಮುಹಮ್ಮದ್ ಜಿಫ್ರಿ ಮುತ್ತು ಕೋಯ ತಂಙಳ್, ಉಪಾಧ್ಯಕ್ಷ ಶೈಖುನಾ ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲು, ಕೋಶಾಧಿಕಾರಿ ಸ್ವಾದಿಕ್ ಮುಸ್ಲಿಯಾರ್, ಸಮಸ್ತ ಶಿಕ್ಷಣ ಮಂಡಳಿಯ ಪ್ರ.ಕಾರ್ಯದರ್ಶಿ ಶೈಖುನಾ ಎಂ.ಟಿ. ಅಬ್ದುಲ್ಲ ಮುಸ್ಲಿಯಾರ್ ಹಾಗೂ ‘ಸುಪ್ರಭಾದಂ’ ಮಲಯಾಳಂ ದೈನಿಕದ ಅಧ್ಯಕ್ಷ ಶೈಖುನಾ ಮುಹಮ್ಮದ್ ಬಹಾವುದ್ದೀನ್ ನದ್ವಿ ಅವರನ್ನು ಸನ್ಮಾನಿಸಲಾಗುವುದು ಎಂದರು.

ಸಭೆಯ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ವಹಿಸಲಿದ್ದು, ಕಾರ್ಯಕ್ರಮವನ್ನು ಸಮಸ್ತ ಮುಶಾವರದ ಪ್ರಧಾನ ಕಾರ್ಯದರ್ಶಿ ಶೈಖುನಾ ಖಾಝಿ ಆಲಿಕುಟ್ಟಿ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ. ಮುಶಾವರದ ದ.ಕ. ಜಿಲ್ಲಾ ಪ್ರ.ಕಾರ್ಯದರ್ಶಿ ಬಿ.ಕೆ.ಅಬ್ದುಲ್ ಖಾದರ್ ಅಲ್ ಖಾಸಿಮಿ, ಸಮಸ್ತ ಶಿಕ್ಷಣ ಮಂಡಳಿಯ ಪ್ರ.ಕಾರ್ಯದರ್ಶಿ ಶೈಖುನಾ ಖಾಝಿ ಎಂ.ಎ.ಖಾಸಿಂ ಮುಸ್ಲಿಯಾರ್, ಕಾರ್ಯಕಾರಿ ಸದಸ್ಯ ಪಿಣಂಗೋಡು ಅಬೂಬಕರ್, ಮುಶಾವರದ ದ.ಕ. ಜಿಲ್ಲಾ ಉಪಾಧ್ಯಕ್ಷ ಶೈಖುನಾ ಖಾಝಿ ವಿ.ಕೆ.ಅಬೂಬಕರ್ ಮುಸ್ಲಿಯಾರ್ ಭಾಗವಹಿಸಲಿದ್ದಾರೆ ಎಂದು ಅಝೀಝ್ ದಾರಿಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮದ್ರಸ ಮ್ಯಾನೇಜ್‌ಮೆಂಟ್‌ನ ಅಧ್ಯಕ್ಷ ಐ.ಮೊಯ್ದಿನಬ್ಬ ಹಾಜಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್, ಕೋಶಾಧಿಕಾರಿ ಶಾಹುಲ್ ಹಮೀದ್ ಹಾಜಿ, ದಕ್ಷಿಣ ಕರ್ನಾಟಕ ಮುಶಾವರದ ಕಾರ್ಯದರ್ಶಿ ಶರೀಫ್ ಫೈಝಿ, ಎಸ್‌ವೈಎಸ್ ಕೋಶಾಧಿಕಾರಿ ಹಾಜಿ ಉಸ್ಮಾನ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಹಾಜಿ, ಎಸ್ಕೆಎಸ್ಸೆಸ್ಸೆಫ್ ಕೋಶಾಧಿಕಾರಿ ಅಬ್ದುಲ್ ಜಲೀಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News