ಚಿಕ್ಕಮಗಳೂರು: ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿ ಆತ್ಮಹತ್ಯೆ

Update: 2017-02-25 11:27 GMT

ಚಿಕ್ಕಮಗಳೂರು, ಫೆ.25: ನಗರದ ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿ ಶುಕ್ರವಾರ ತಡ ರಾತ್ರಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಅರಣ್ಯ ಇಲಾಖೆಯಲ್ಲಿ ಸೇವಕನಾಗಿ ಕೆಲಸ ನಿರ್ವಹಿಸುತ್ತಿದ್ದ ರುದ್ರೇಶ್(50) ಎಂದು ಗುರುತಿಸಲಾಗಿದೆ.

ಈ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಶನಿವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ರುದ್ರೇಶ್ ಅರಣ್ಯ ಇಲಾಖೆಯಲ್ಲಿ ಕಚೇರಿಯ ಸೇವಕನಾಗಿ ಕಳೆದ 25 ವರ್ಷಗಳಿಂದ ಕಾರ್ಯವನ್ನು ನಿರ್ವಹಿಸುತ್ತಿದ್ದರು.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಚೇರಿಯ ಹಿಂಬಾಗದಲ್ಲಿ ಚೇರ್ ಮೇಲೆ ನಿಂತು ಆತ್ಮಹತ್ಯೆ ಮಾಡಿಕೊಂಡಿರುವಂತೆ ಶವ ಕಾಣಿಸಿಕೊಂಡಿದೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ನಗರ ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನಗರ ಪೊಲಿಸ್ ಠಾಣೆಯಲ್ಲಿ ಈ ಕುರಿತು ಆತ್ಮಹತ್ಯೆ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News