ಮದ್ಯಪಾನಕ್ಕೆ ಹಣ ನೀಡದ ತಂದೆಯನ್ನೇ ಕೊಂದ ಪುತ್ರ
Update: 2017-03-04 05:36 GMT
ಬೆಳಗಾವಿ, ಮಾ.4: ಮದ್ಯಪಾನ ಮಾಡಲು ಹಣ ನೀಡದ ಕಾರಣಕ್ಕೆ ತಂದೆಯನ್ನು ಮಗನೇ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಮಾಯಪ್ಪ ಬ್ಯಾಕುಡ(55) ಕೊಲೆಯಾದವರು. ಅವರ ಪುತ್ರ ರಮೇಶ್ ಬ್ಯಾಕುಡ(24) ಕೊಲೆ ಆರೋಪಿಯಾಗಿದ್ದಾನೆ. ಆರೋಪಿ ರಮೇಶ್ ಮದ್ಯಪಾನ ಮಾಡಲು ಹಣ ನೀಡುವಂತೆ ತಂದೆಯನ್ನು ಪೀಡಿಸುತ್ತಿದ್ದನೆನ್ನಲಾಗಿದೆ. ಹಣ ನೀಡಲು ನಿರಾಕರಿಸಿದ ಮಾಯಪ್ಪರನ್ನು ರಮೇಶ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾನೆ ಎಂದು ಹೇಳಲಾಗಿದೆ. ಆರೋಪಿ ರಮೇಶ್ ತಲೆಮರೆಸಿಕೊಂಡಿದ್ದಾನೆ.
ಈ ಬಗ್ಗೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.