×
Ad

ಓಮ್ನಿ - ರಿಟ್ಝ್ ನಡುವೆ ಢಿಕ್ಕಿ: ಐವರಿಗೆ ಗಾಯ

Update: 2017-03-05 18:24 IST

ಕಡಬ, ಮಾ.6: ಕಡಬ ಸಮೀಪದ ನೆಟ್ಟಣದಲ್ಲಿ  ಓಮ್ನಿ - ರಿಟ್ಝ್ ನಡುವೆ ಢಿಕ್ಕಿ ಸಂಭವಿಸಿ ಐವರಿಗೆ ಗಾಯವಾದ ಘಟನೆ ನಡೆದಿದೆ.

ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ರಿಟ್ಝ್ ಹಾಗೂ ಕಡಬ ಕಡೆಗೆ ಆಗಮಿಸುತ್ತಿದ್ದ ಓಮ್ನಿ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ.

ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದ ಘಟನೆ ಇದಾಗಿದ್ದು, ಸ್ಥಳಕ್ಕೆ ಕಡಬ ಠಾಣಾಧಿಕಾರಿ ಪ್ರಕಾಶ್ ದೇವಾಡಿಗ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News