ಪೂಂಜಾಲಕಟ್ಟೆ: ಸರಕಾರಿ ಕಾಲೇಜು ಕಟ್ಟಡ ಉದ್ಘಾಟನೆ

Update: 2017-03-05 18:55 GMT

ಬೆಳ್ತಂಗಡಿ, ಮಾ.5: ಪೂಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ ಸಮಾರಂಭವು ಇತ್ತೀಚೆಗೆ ನಡೆಯಿತು. 

ಅರಣ್ಯ ಸಚಿವ ಬಿ.ರಮಾನಾಥ ರೈ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಶಾಸಕ ಕೆ.ವಸಂತ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಜಿಪಂ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಶಾಹುಲ್ ಹಮೀದ್ ಅತಿಥಿಗಳಾಗಿದ್ದರು.

ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ರಾಜಶೇಖರ ಶೆಟ್ಟಿ, ಶೈಲೇಶ್ ಕುಮಾರ್, ಪದ್ಮನಾಭ ಸಾಲ್ಯಾನ್, ಕೆ.ಎ.ವೆಂಕಪ್ಪ ಬಂಗೇರ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಮೋಹನ್ ಸಾಲ್ಯಾನ್, ಮಾಜಿ ಅಧ್ಯಕ್ಷ ದೇವಪ್ಪಶೆಟ್ಟಿ ಕುಂಟಜಾಲು, ಸದಸ್ಯರಾದ ಉಸ್ಮಾನ್ ಪಿ., ಹೈದರ್ ಹಳ್ಳಿಮನೆ, ಗಣೇಶ್ ಮೂಲ್ಯ, ದಿನೇಶ್ ಆಚಾರ್ಯ, ಸಾಂತಪ್ಪ ಪುರಿಯ, ಮಾಲತಿ, ವಿನೋದ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಗೌಡ ವೇದಿಕೆಯಲ್ಲಿದ್ದರು.

ಇದೇ ವೇಳೆ ಶಾಸಕ ಕೆ.ವಸಂತ ಬಂಗೇರ, ಕಟ್ಟಡ ನಿರ್ಮಾಣ ಕಾಮಗಾರಿಗೆ ಸಹಕರಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ರಾಜೇಂದ್ರ ಕೆ.ವಿ., ದೇವಪ್ಪಶೆಟ್ಟಿ, ರೈಟ್ಸ್ ಸಂಸ್ಥೆಯ ಸುನೀಲ್, ಅನೀಶ್, ಪ್ರಾ.ಶಾಲಾ ಮುಖ್ಯ ಶಿಕ್ಷಕ ಮೋನಪ್ಪಕೆ., ಪ್ರೌಢಶಾಲಾ ಉಪ ಪ್ರಾಂಶುಪಾಲೆ ಅರ್ಚನಾ, ಪಪೂ ಕಾಲೇಜು ಪ್ರಾಂಶುಪಾಲ ಸುಕುಮಾರ್‌ರನ್ನು ಸನ್ಮ್ಮಾನಿಸಲಾಯಿತು.

ಕಾಲೇಜು ಪ್ರಾಂಶುಪಾಲ ಪ್ರೊ.ಗಣಪತಿ ಭಟ್ ಕುಳಮರ್ವ ಸ್ವಾಗತಿಸಿದರು. ಪ್ರೊ.ಚೇತನ್ ಪ್ರಾಸ್ತಾವಿಸಿದರು. ಪ್ರೊ.ಮಾಧವ ವಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಮತ್ತು ಪ್ರೊ.ಚಂದ್ರಪ್ಪಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News