‘ಸಮಾಜ ನಿರ್ಮಾಣದಲ್ಲಿ ಮಹಿಳೆ ಪಾತ್ರ ಅನನ್ಯ’

Update: 2017-03-08 18:22 GMT

ಮಂಗಳೂರು, ಮಾ.8: ಮಹಿಳೆಗೆ ಅಕಾರ ನೀಡಿದರೆ ಆಕೆ ಸುಸೂತ್ರವಾಗಿ ಅಭಿವೃದ್ಧಿ ಪಥದಲ್ಲಿ ದೇಶವನ್ನು ಮುನ್ನಡೆಸಬಲ್ಲಳು ಎಂಬುದನ್ನು ಸ್ವಾತಂತ್ರ ಪೂರ್ವ ಹಾಗೂ ಆನಂತರದ ದಿನಗಳಲ್ಲಿ ಹಲವಾರು ಮಹಿಳೆಯರು ಸಾಬೀತು ಪಡಿಸಿದ್ದಾರೆ. ಇದರ ಜತೆ ಪರಿಪೂರ್ಣ, ಸ್ವಸ್ಥ ಹಾಗೂ ಜ್ಞಾನಭರಿತ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಅನನ್ಯ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜ ಅಭಿಪ್ರಾಯಿಸಿದ್ದಾರೆ. 

ಇಂದು ನಗರದ ರಾಜ್ಯ ಸರಕಾರಿ ನೌಕರರ ಸಭಾಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆಯಾಗಿ ಆಯ್ಕೆಯಾಗಿರುವ ಜಿಲ್ಲೆಯ ಸಾಧಕ ಮಹಿಳೆಯನ್ನು ಸನ್ಮಾನಿಸಲಾಯಿತು.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಬೆಳ್ತಂಗಡಿ ಶಿಶು ಅಭಿವೃದ್ಧಿ ಕೇಂದ್ರದ ಕುಂಡದಬೆಟ್ಟು ಅಂಗನವಾಡಿಯ ಜಾನಕಿ, ಸುಳ್ಯ ಬಳ್ಪ ಅಂಗನವಾಡಿಯ ಮೋಹಿನಿ, ಬಗಂಬಿಲದ ಪುಷ್ಪಾ ಕುಮಾರಿ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಬಂಟ್ವಾಳ ಶಂಭೂರಿನ ಪ್ರೇಮಾ ಅವರನ್ನು ವೇದಿಕೆಯಲ್ಲಿದ್ದ ಅತಿಥಿಗಳು ಗೌರವಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾೀಶ ಮಲ್ಲನಗೌಡ ಮೊದಲಾದವರು ಉಪಸ್ಥಿತರಿದ್ದರು. ಉದ್ಘಾಟನಾ ಸಮಾರಂಭಕ್ಕೆ ಮೊದಲು ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದ ಪ್ರೊ.ಶೆರ್ಲಿ ಟಿ.ಬಾಬು ಅವರು ಮಹಿಳಾ ಭ್ರೂಣ ಹತ್ಯೆ ಕುರಿತ ಮಾಹಿತಿ ನೀಡಿದರು.

 ಜಿಲ್ಲಾ ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಸವಿತಾ, ಸೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಕಾಂತಿ ಓಹನ್, ತಾಲೂಕು ಒಕ್ಕೂಟದ ಅಧ್ಯಕ್ಷೆ ಸಾಜ್ ಸುಲ್ತಾನ್ ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ ಸ್ವಾಗತಿಸಿದರು. ಶೋಭಾ ಕಾರ್ಯಕ್ರಮ ನಿರೂಪಿಸಿದರು. ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರಿ, ಜಿಲ್ಲಾ ಸೀ ಶಕ್ತಿ ಒಕ್ಕೂಟ ಹಾಗೂ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಇವುಗಳ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News