ಸಿಟಿ ರವಿ ಟ್ವೀಟರ್: ಸಿಎಂ ಖಂಡನೆ

Update: 2017-03-10 14:54 GMT

ಬೆಂಗಳೂರು, ಮಾ.10: ಎಐಸಿಸಿ ಅಧ್ಯಕ್ಷ್ಯೆ ಸೋನಿಯಾ ಗಾಂಧಿ  ಬಗ್ಗೆ ಬಿಜೆಪಿ ಶಾಸಕ ಸಿ.ಟಿ. ರವಿ ಅವರ ಟ್ವಿಟರ್ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ರವಿ ಅವರ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ ಎಂದು ಮುಖ್ಯಮಂತ್ರಿಯವರು ಪ್ರತಿಕ್ರಿಯಿಸಿದ್ದಾರೆ. 

ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ದೇಶಕ್ಕಾಗಿ ಪ್ರಧಾನಿ ಹುದ್ದೆ ತ್ಯಾಗ ಮಾಡಿದವರು ಸೋನಿಯಾ ಗಾಂಧಿ. ಅಂತಹವರ ಬಗ್ಗೆ ಹೇಳಿಕೆ ನೀಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು. ರವಿ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News