ಯೋಗೇಶ್ ಮಾಸ್ಟರ್ ಮೇಲೆ ಮಸಿ ಎರಚಿ ಹಲ್ಲೆ ಪ್ರಕರಣ: ಹಿಂದೂ ಜಾಗರಣ ವೇದಿಕೆಯ ಇಬ್ಬರ ಬಂಧನ

Update: 2017-03-13 11:22 GMT

ದಾವಣಗೆರೆ, ಮಾ.13: ನಗರದ ಕುವೆಂಪು ಕನ್ನಡ ಭವನದ ಬಳಿ ರವಿವಾರ ಸಂಜೆ ಲೇಖಕ ಯೋಗೇಶ್ ಮಾಸ್ಟರ್ ಮೇಲೆ ಮಸಿ ಎರಚಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.

ಹಿಂದು ಜಾಗರಣಾ ವೇದಿಕೆಯ ಶಿವಪ್ರಸಾದ್ ಹಾಗೂ ಚೇತನ್ ಬಂಧಿತರು.

ನಗರದ ಕುವೆಂಪು ಕನ್ನಡ ಭವನದಲ್ಲಿ ಲಂಕೇಶ್-82 ಕಾರ್ಯಕ್ರಮಕ್ಕೆಂದು ಯೋಗೇಶ್ ಮಾಸ್ಟರ್ ದಾವಣಗೆರೆಗೆ ಆಗಮಿಸಿದ್ದರು. ಕಾರ್ಯಕ್ರಮದ ನಂತರ ಖಾಸಗಿ ಹೋಟೆಲ್‌ಗೆ ತೆರಳಿದ್ದ ವೇಳೆ ಅವರ ಮೇಲೆ ಕೆಲ ಕಿಡಿಗೇಡಿಗಳು ಮಸಿ ಎರಚಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಈ ಬಗ್ಗೆ ಬಡಾವಣಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದ್ದು, ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆ ಕಾರ್ಯ ಸಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News