ಮರದಿಂದ ಬಿದ್ದು ಕಾರ್ಮಿಕನಿಗೆ ತೀವ್ರ ಗಾಯ
Update: 2017-03-13 23:09 IST
ಸುಂಟಿಕೊಪ್ಪ, ಮಾ.13: ಇಲ್ಲಿಗೆ ಸಮೀಪದ ಸುಂಟಿಕೊಪ್ಪ ಟಾಟಾ ಕಾಫಿ ತೋಟದಲ್ಲಿ ಕಾರ್ಮಿಕನೊಬ್ಬ ಮರದಿಂದ ಬಿದ್ದು ತೀವ್ರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ತೋಟದ ರೈಟರ್ ನೆಲೆಸಿರುವ ಮನೆಯ ಹಿಂಭಾಗದಲ್ಲಿದ್ದ ತೆಂಗಿನ ಮರಕ್ಕೆ ಹತ್ತಿದ್ದ ಸುರೇಶ್ ( 46) ಎಂಬ ಕಾರ್ಮಿಕ ಆಯತಪ್ಪಿ ಸುಮಾರು 30 ಅಡಿ ಎತ್ತರದಿಂದ ಬಿದ್ದ ಪರಿಣಾಮ ಆತನ ಸೊಂಟ ಮುರಿದಿದ್ದು, ಕೈ ಕಾಲುಗಳಿಗೆ ತೀವ್ರ ಸ್ವರೂಪದ ಪೆಟ್ಟಾಗಿದ್ದು, ಸುಂಟಿಕೊಪ್ಪ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು.