ಬೊಮ್ಮಸಂದ್ರ ಪುರಸಭೆಯ ಬಿಜೆಪಿ ಸದಸ್ಯನ ಕೊಚ್ಚಿ ಕೊಲೆ

Update: 2017-03-14 04:50 GMT

ಬೆಂಗಳೂರು, ಮಾ.14: ಬೊಮ್ಮಸಂದ್ರ ಪುರಸಭೆಯ ಬಿಜೆಪಿ ಸದಸ್ಯನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಗ್ಗಿನ ಜಾವ ಬೊಮ್ಮಸಂದ್ರ ಸಮೀಪದ ನಾರಾಯಣ ಹೃದಯಾಲಯ ಆಸ್ಪತ್ರೆಯ ಬಳಿ ನಡೆದಿದೆ.

 ಕಿತ್ತಗಾನಹಳ್ಳಿ ವಾಸು(38ವರ್ಷ) ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ ಲಾಂಗು-ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ. ತಲೆ ಹಾಗೂ ಎದೆ ಭಾಗಕ್ಕೆ ತೀವ್ರ ಗಾಯಗೊಂಡಿದ್ದ ವಾಸು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಕೀಯ ವೈಷಮ್ಯವೇ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News