×
Ad

ಅಬಕಾರಿ ದಾಳಿ: ಓರ್ವನ ಬಂಧನ

Update: 2017-03-14 18:18 IST

ಮೂಡಿಗೆರೆ, ಮಾ.14: ಕಳ್ಳಬಟ್ಟಿ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿರುವ ಅಬಕಾರಿ ಪೊಲೀಸರು, ಓರ್ವನನ್ನು ಬಂಧಿಸಿ ಕಳ್ಳಬಟ್ಟಿ ಹಾಗೂ ಕೊಳೆಯನ್ನು ವಶಪಡಿಸಿಕೊಂಡಿದ್ದಾರೆ.

  ಬಣಕಲ್ ಹೋಬಳಿ ತ್ರಿಪುರ ಗ್ರಾಮದದಲ್ಲಿ ಕಳ್ಳಬಟ್ಟಿ ತಯಾರಿಸುತ್ತಿದ್ದ ಮನೆಯೊಂದರೆ ಮೇಲೆ ದಾಳಿ ನಡೆಸಿ 2 ಲೀಟರ್ ಕಳ್ಳಬಟ್ಟಿ ಸರಾಯಿ, 55 ಲೀಟರ್ ಬೆಲ್ಲದ ಕೊಳೆ ಹಾಗೂ ತಯಾರಿಕಾ ಪರಿಕರಗಳನ್ನು ವಶಪಡಿಸಿಕೊಂಡ ಅಬಕಾರಿ ಪೊಲೀಸರು, ರತೀಶ್ ಎಂಬಾತನನ್ನು ಬಂದಿಸಿ ನ್ಯಾಯಾಲಯಕ್ಕೆ ಹಾಜರಿ ಪಡಿಸಿದರು.

  ದಾಳಿಯಲ್ಲಿ ಅಬಕಾರಿ ಪೊಲೀಸ್ ಉಪಾದೀಕ್ಷಕ ಕೆ.ಜಿ.ಸಂತೋಷ್, ಸರ್ಕಲ್ ಇನ್ಸ್‌ಪೆಕ್ಟರ್ ಆನಂದ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News