×
Ad

ಕರ್ತವ್ಯ ನಿರತ ವೈದ್ಯರಿಗೆ ಹಲ್ಲೆ: ಇಬ್ಬರು ಆರೋಪಿಗಳ ಸೆರೆ

Update: 2017-03-14 21:34 IST

ಮಂಗಳೂರು, ಮಾ.14: ನಗರದ ಹೈಲ್ಯಾಂಡ್ ಆಸ್ಪತ್ರೆಯ ಕರ್ತವ್ಯನಿರತ ವೈದ್ಯಾಧಿಕಾರಿಗೆ ಹಲ್ಲೆ ನಡೆಸಿ ಆಸ್ಪತ್ರೆಯ ಸೊತ್ತುಗಳನ್ನು ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಣ್ಣೂರಿನ ಮುಸ್ತಾಕ್ ಅಹ್ಮದ್ (26) ಮತ್ತು ಅಮ್ಮೆಮಾರ್‌ನ ಮುಹಮ್ಮದ್ ಫಝುಲ್ (22) ಎಂದು ಗುರುತಿಸಲಾಗಿದೆ. ಜ.22ರಂದು ಹೈಲ್ಯಾಂಡ್ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿದ್ದ ಡಾ. ಟಿಂಟೋ ಥಾಮಸ್‌ರಿಗೆ ಮೂವರು ಹಲ್ಲೆ ನಡೆಸಿದ್ದು, ಆ ಪೈಕಿ ಒಬ್ಬನನ್ನು ಈಗಾಗಲೆ ಬಂಧಿಸಲಾಗಿದ್ದರೆ, ಇದೀಗ ಇಬ್ಬರ ಸೆರೆಯಾಗಿದೆ.

ಅಂದು ರಾತ್ರಿ ಮೂವರು ಆಸ್ಪತ್ರೆಗೆ ಬಂದಿದ್ದು, ಆ ಪೈಕಿ ಒಬ್ಬಾತನ ಕೈಗೆ ಗಾಯವಾಗಿತ್ತು. ಆತನಿಗೆ ಚಿಕಿತ್ಸೆ ನೀಡುವ ಸಲುವಾಗಿ ಆಸ್ಪತ್ರೆಯ ನಿಯಮದ ಬಗ್ಗೆ ವೈದ್ಯರು ಹೇಳುತ್ತಿದ್ದ ವೇಳೆ ಒಬ್ಬಾತ ಆಸ್ಪತ್ರೆಯ ಕರ್ತವ್ಯ ನಿರತ ವೈದ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆಯೊಡ್ಡಿದ್ದಲ್ಲದೆ ಮುಖಕ್ಕೆ ಕೈಯಿಂದ ಪಂಚ್ ಮಾಡಿದ್ದ. ಅಲ್ಲದೆ ಆಸ್ಪತ್ರೆಯ ವೈದ್ಯಕೀಯ ದಾಖಲೆಗಳನ್ನು ಬಿಸಾಡಿ, ದೂರವಾಣಿಯ ಸಂಪರ್ಕ ಕಡಿದು ಹಾಕಿದ್ದರು. ಹಾಗೇ ಓಡಿ ಹೋಗುವಾಗ ಆಸ್ಪತ್ರೆಯ ಆ್ಯಂಬುಲೆನ್ಸ್‌ನ ಹೆಡ್‌ಲೈಟ್‌ಗೆ ಗುದ್ದಿ ಹುಡಿ ಮಾಡುವ ಮೂಲ ದಾಂಧಲೆ ನಡೆಸಿ ಪರಾರಿಯಾಗಿದ್ದರು.

ಈ ಬಗ್ಗೆ ವೈದ್ಯಾಧಿಕಾರಿ ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ಕರ್ತವ್ಯನಿರತ ವೈದ್ಯಾಧಿಕಾರಿಗೆ ಹಲ್ಲೆ, ಜೀವ ಬೆದರಿಕೆ ಹಾಗೂ ಆಸ್ಪತ್ರೆಯ ಸೊತ್ತಿಗೆ ಹಾನಿಗೊಳಿಸಿದ್ದಕ್ಕಾಗಿ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೃತ್ಯದಲ್ಲಿ ಭಾಗಿಯಾದ ಒಬ್ಬನನ್ನು ಪೊಲೀಸರು ದಸ್ತಗಿರಿ ಮಾಡಿದ್ದರು. ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಮಂಗಳವಾರ ಅಡ್ಯಾರ್ ಕಣ್ಣೂರು ಮಸೀದಿ ಬಳಿಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಪಾಂೇಶ್ವರ ಠಾಣೆಗೆ ಹಸ್ತಾಂತರಿಸಿದ್ದಾರೆ.

ಬಂಧಿತ ಆರೋಪಿಗಳು ಈ ಹಿಂದೆ ಅಡ್ಯಾರ್ ಕಣ್ಣೂರು ಬಳಿ ನಡೆದ ಇಜಾಝ್ ಎಂಬಾತನ ಕೊಲೆ ಪ್ರಕರಣ ಹಾಗು ವ್ಯಕ್ತಿಯೊಬ್ಬರ ಕೊಲೆಗೆ ಮತ್ತು ದರೋಡೆಗೆ ಸಂಚು ರೂಪಿಸಿದ, ಜೀವ ಬೆದರಿಕೆ ಹಾಕಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.

ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಸುನೀಲ್ ವೈ. ನಾಯ್ಕ್ ಮತ್ತು ಎಸ್ಸೈ ಶ್ಯಾಮ್ ಸುಂದರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News