ಬಜೆಟ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಿಕ್ಕಿದ್ದೇನು...? ವಿವರಗಳಿಗಾಗಿ ಕ್ಲಿಕ್ ಮಾಡಿ
ಮಂಗಳೂರು, ಮಾ.15: ವಿತ್ತ ಖಾತೆಯ ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಂದು ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಸಾರ್ವತ್ರಿಕ ಯೋಜನೆಗಳು, ಅನುದಾನದ ಜತೆಯಲ್ಲೇ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕವಾಗಿ ಕೆಲವೊಂದು ಸೌಲಭ್ಯಗಳು ಘೋಷಣೆಯಾಗಿವೆ.
ಅವು ಈ ಕೆಳಗಿನಂತಿವೆ:
1) 50 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-67ರ ಮಂಗಳೂರು-ಅತ್ರಾಡಿ ರಸ್ತೆಯಲ್ಲಿ 2.5 ಕಿ.ಮೀ. ಉದ್ದ ರಸ್ತೆಯ ಅಭಿವೃದ್ಧಿ. ( ಕಾವೂರು-ಮರಕಡ ಮಹಾನಗರಪಾಲಿಕೆ ಗಡಿಯಿಂದ ಕೆಂಜಾರು ವಿಮಾನ ನಿಲ್ದಾಣದ ಪ್ರವೇಶ ದ್ವಾರದವರೆಗೆ ಚತುಷ್ಫಥ ರಸ್ತೆ).
2) ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ವಿಸ್ತರಣೆಗೆ 286 ಎಕರೆ ಭೂಸ್ವಾಧೀನಕ್ಕಾಗಿ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆ- ರಾಜ್ಯ ಸರಕಾರದಿಂದ ಅಗತ್ಯ ಸೌಲಭ್ಯ.
3) ಮೊಗವೀರರು, ಬೆಸ್ತರ ಸಮಗ್ರ ಅಭಿವೃದ್ಧಿಗಾಗಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಸ್ಥಾಪನೆ.
4) 10 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಯೋಜನೆ.
5) 3 ಕೋಟಿ ರೂ. ವೆಚ್ಚದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಮಾದರಿಯಲ್ಲಿ ಪ್ರಾದೇಶಿಕ ಹಾಗೂ ಉನ್ನತ ಮಕ್ಕಳ ಆರೋಗ್ಯ ಸಂಸ್ಥೆಯ ಸ್ಥಾಪನೆ.
6) ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ದೋಣಿಗಳ ಸುರಕ್ಷಿತ ಇಳಿದಾಣಕ್ಕಾಗಿ 5 ಕೋಟಿ ರೂ. ವೆಚ್ಚದಲ್ಲಿ ಹಾಲಿ ಜೆಟ್ಟಿಯನ್ನು ಇನ್ನೂ 75 ಮೀಟರ್ ವಿಸ್ತರಣೆ.
9) ಕರಾವಳಿಯ ಮೀನುಗಾರರಿಗೆ ಮತ್ಸ್ಯಾಶ್ರಯ ಯೋಜನೆಯಡಿ 3,000 ಮನೆಗಳ ನಿರ್ಮಾಣ.
10) ಕರಾವಳಿಯ 200 ಮಂಜುಗಡ್ಡೆ ಸ್ಥಾವರಗಳಿಗೆ, 35 ಶೈತ್ಯಾಗಾರಗಳಿಗೆ ವಿದ್ಯುಚ್ಛಕ್ತಿ ಮೇಲೆ ನೀಡುವ ಸಹಾಯಧನ ಪ್ರತೀ ಯುನಿಟ್ ವಿದ್ಯುತ್ಗೆ ರೂ. 1.75ಕ್ಕೆ ಹೆಚ್ಚಳ.
11) ಕರಾವಳಿಯ ನದಿಗಳನ್ನು ಜೋಡಿಸುವ ಪಶ್ಚಿಮವಾಹಿನಿ ಯೋಜನೆಗೆ 100 ಕೋಟಿ ರೂ.
12) ಈ ವರ್ಷದಿಂದ ಮಂಗಳೂರು ತಾಲೂಕಿನ ಸಸಿಹಿತ್ಲು ಕಡಲ ತೀರದಲ್ಲಿ ರಾಷ್ಟ್ರೀಯ ವಾರ್ಷಿಕ ಸರ್ಫಿಂಗ್ ಉತ್ಸವ ಆಯೋಜನೆ.
13) ಮೂಡಬಿದ್ರೆ ಹಾಗೂ ಕಡಬ ಪ್ರತ್ಯೇಕ ತಾಲೂಕು ಸ್ಥಾಪನೆ.
14) ಬಂಟ್ವಾಳದಲ್ಲಿ ನೂತನ ಆರ್.ಟಿ.ಓ. ಕಚೇರಿ ಸ್ಥಾಪನೆ.
15) ಮಂಗಳೂರಿನಲ್ಲಿ ಹಜ್ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ.
16) ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ 20 ಕೋಟಿ ರೂ. ಅನುದಾನ.
17) ಮಂಗಳೂರಿನಲ್ಲಿ ಸಮುದ್ರ ನೀರು ಸಂಸ್ಕರಣಾ ಘಟಕ ಸ್ಥಾಪನೆ.
19) ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬ್ಯಾರಿ ಅಧ್ಯಯನ ಪೀಠ ಸ್ಥಾಪನೆ.
20) ಪಿಲಿಕುಲ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ 35.69 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ತಾರಾಲಯ ಡಿಸೆಂಬರ್ 2017ರಲ್ಲಿ ಪ್ರಾರಂಭ.
21) ಮಂಗಳೂರು ಜಿಲ್ಲಾ ನ್ಯಾಯಾಲಯದ ಛಾವಣಿಯಲ್ಲಿ ಗ್ರಿಡ್ ಸಂಪರ್ಕವಿರುವ ಸೋಲಾರ್ ಛಾವಣಿ ಅಳವಡಿಕೆ.
22) ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಹಿಂದಿರುಗುವ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕೇರಳ ಮಾದರಿಯ ಕಾರ್ಯಕ್ರಮ ಜಾರಿ