ನಾಳೆ ಕಾರ್ಕಳದಲ್ಲಿ ವಿಚಾರಗೋಷ್ಠಿ

Update: 2017-03-16 18:51 GMT

ಕಾರ್ಕಳ, ಮಾ.16: ಕನ್ನಡದ ಖ್ಯಾತ ಲೇಖಕ ಹಾಗೂ ಪತ್ರಕರ್ತ ಪಾಂ.ವೆ.ಆಚಾರ್ಯ ಅವರ ಬದುಕು ಮತ್ತು ಬರಹದ ಕುರಿತಂತೆ ಕೇಂದ್ರ ಸಾಹಿತ್ಯ ಅಕಾಡಮಿಯು ಕಾರ್ಕಳದ ಶ್ರೀಭುವನೇಂದ್ರ ಕಾಲೇಜಿನಲ್ಲಿ ಮಾ.18ರಂದು ವಿಚಾರಗೋಷ್ಠಿಯನ್ನು ಹಮ್ಮಿಕೊಂಡಿದೆ.

ಹಿರಿಯ ಲೇಖಕ ಡಾ.ಶ್ಯಾಮಸುಂದರ ಬಿದರಕುಂದಿ ವಿಚಾರಗೋಷ್ಠಿಯನ್ನು ಉದ್ಘಾಟಿಸಲಿದ್ದು, ಡಾ.ಎಚ್.ಶಾಂತಾರಾಮ್ ಅಧ್ಯಕ್ಷತೆ ವಹಿಸಲಿದ್ದಾರೆ. ನಂತರದ 2 ಗೋಷ್ಠಿಗಳಲ್ಲಿ ಲಕ್ಷ್ಮೀಶ ತೋಳ್ಪಾಡಿ, ಡಾ. ರಾಘವ ನಂಬಿಯಾರ್, ಡಾ.ಗಿರೀಶ್ ಭಟ್ ಅಜಕ್ಕಳ, ಭುವನೇಶ್ವರಿ ಹೆಗಡೆ, ಪ್ರೊ.ರಾಧಾಕೃಷ್ಣ ಆಚಾರ್ಯ ಭಾವಹಿಸುವರು. ಸಂಜೆ ಡಾ.ತಾಳ್ತಜೆ ವಸಂತ ಕುಮಾರ್ ಸಮಾರೋಪ ಭಾಷಣ ಮಾಡುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News