ಐಟಿ ದಾಳಿ ರಾಜಕೀಯಪ್ರೇರಿತ: ಸಿದ್ದರಾಮಯ್ಯ

Update: 2017-03-18 07:17 GMT

ಬೆಂಗಳೂರು, ಮಾ.18: ಕಾಂಗ್ರೆಸ್ ಶಾಸಕರು ಮತ್ತು ಸಚಿವರನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ಅಧಿಕಾರಿಗಳು ನಡೆಸುತ್ತಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ, ಐಟಿ ದಾಳಿ ಹಿಂದೆ ರಾಜಕೀಯ ಷಡ್ಯಂತ್ರ ಇದೆ ಎಂದರು. ಆದಾಯ ತೆರಿಗೆ ಪಾವತಿಸುವವರು, ಕಟ್ಟದವರು ಬಿಜೆಪಿಯಲ್ಲಿ ಇಲ್ಲವೇ? ಐಟಿ ಅಧಿಕಾರಿಗಳಿಗೆ ಕೇವಲ ಕಾಂಗ್ರೆಸ್ ಶಾಸಕರು, ಮುಖಂಡರು, ಸಚಿವರು ಮಾತ್ರ ಕಾಣಿಸುವಿದೇಕೇ? ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ದಾಳಿಗೆ ಐಟಿ ಅಧಿಕಾರಿಗಳು ಸಜ್ಜಾಗಿರುವ ಕುರಿತು ಮಾಧ್ಯಮ ಪ್ರತಿನಿಧಿಗಳು ಗಮನ ಸೆಳೆದಾಗ ಮುಖ್ಯಮಂತ್ರಿ ಈ ರೀತಿ ಪ್ರತಿಕ್ರಿಯೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News