ಭೀಕರ ರಸ್ತೆ ಅಪಘಾತಕ್ಕೆ 11 ಮಂದಿ ಬಲಿ

Update: 2017-03-18 07:53 GMT

ಚಿತ್ರದುರ್ಗ, ಮಾ.18: ಭೀಕರ ರಸ್ತೆ ಅಪಘಾತದಲ್ಲಿ ಆಟೊ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 11 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಮೊಳಕಾಲ್ಮೂರು ತಾಲೂಕಿನ ರಾಂಪುರ ಎಂಬಲ್ಲಿ ಶನಿವಾರ ಪೂರ್ವಾಹ್ನ ನಡೆದಿದೆ.

ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ಲಾರಿ ಮತ್ತು ಆಟೋ ರಿಕ್ಷಾ ನಡುವೆ ಈ ಅಪಘಾತ ಸಂಭವಿಸಿದೆ. ಲಾರಿಯ ಚಕ್ರ ಸ್ಫೋಟಗೊಂಡಿದ್ದೇ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಚಕ್ರ ಸ್ಫೋಟಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಎದುರಿನಿಂದ ಬರುತ್ತಿದ್ದ ಆಟೊ ರಿಕ್ಷಾ ಸೇರಿದಂತೆ ಇತರ ಮೂರು ವಾಹನಗಳಿಗೆ ಢಿಕ್ಕಿ ಹೊಡದಿದೆ.

ಇದರಿಂದ ಹನ್ನೊಂದು ಮಂದಿ ಮೃತಪಟ್ಟಿದ್ದಾರೆ. ನಾಲ್ಕೈದು ಮಂದಿ ಗಂಭೀರ ಗಾಯಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News