‘ನೀರು ಉಳಿಸಿ ಬೆಂಗಳೂರು ಉಳಿಸಿ’ ಜಾಗೃತಿ ಜಾಥಾಕ್ಕೆ ಸಿಎಂ ಚಾಲನೆ

Update: 2017-03-22 05:38 GMT

ಬೆಂಗಳೂರು, ಮಾ.22: ವಿಶ್ವ ಜಲ ದಿನದ ಅಂಗವಾಗಿ ‘ನೀರು ಉಳಿಸಿ ಬೆಂಗಳೂರು ಉಳಿಸಿ’ ಜಾಗೃತಿ ಜಾಥಾಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು.

 ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೇತೃತ್ವದಲ್ಲಿಂದು ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಸ್ತುತ ನಾಡಿನೆಲ್ಲೆಡೆ ಭೀಕರ ಬರದ ಪರಿಸ್ಥಿತಿ ಇದೆ. ಇಂತಹ ಕಾಲಘಟ್ಟದಲ್ಲಿ ತ್ಯಾಜ ನೀರಿನ ಪುನರ್ ಬಳಕೆ ಅನಿವಾರ್ಯವಾಗಿ ಆಕಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ನೀರು ಸಂರಕ್ಷಣೆ ಬಗ್ಗೆ ಮುಖ್ಯಮಂತ್ರಿವಯವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಮಾಜಿ ಸಚಿವ ಪಿ.ಜಿ. ಆರ್.ಸಿಂಧ್ಯಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News