ರಿಯಾಝ್ ಮುಸ್ಲಿಯಾರ್ ಹಂತಕರನ್ನು ಶೀಘ್ರವಾಗಿ ಬಂಧಿಸಲು ಎಸ್‌ಡಿಪಿಐ ಆಗ್ರಹ

Update: 2017-03-22 12:03 GMT

ಮಂಗಳೂರು,ಮಾ.22 ಕಾಸರಗೋಡು ಜಿಲ್ಲೆಯ ಹಳೆಯ ಚೂರಿ ಎಂಬಲ್ಲಿ ಮಸೀದಿಯ ಮುಅಝ್ಝಿನ್ ಉದ್ಯೋಗದಲ್ಲಿರುವ ರಿಯಾಝ್ ಮುಸ್ಲಿಯಾರರನ್ನು ರಾತ್ರಿ ಮಸೀದಿಯೊಳಗೆ ನುಗ್ಗಿದ ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆಗೈದಿರುವುದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆರ್ಫ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ.

ಕಾಸರಗೋಡು ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಶಾಂತಿಯ ವಾತಾವರಣಗಳು ಸೃಷ್ಟಿಯಾಗಿದ್ದು ಇದನ್ನು ಸಹಿಸದ ಫ್ಯಾಸಿಸ್ಟ್ ಶಕ್ತಿಗಳು ಈ ರೀತಿಯ ಹತ್ಯೆಗಳನ್ನು ಮಾಡಿ ಅಶಾಂತಿ ಸೃಷ್ಟಿಸಿ ಕೋಮು ಗಲಭೆಯನ್ನು ನಡೆಸಲು ಪ್ರಯತ್ನಿಸುತ್ತಿದ್ದಾರೆ. ಶಾಂತಿಯುತವಾಗಿದ್ದಂತಹ ಪ್ರದೇಶಗಳಲ್ಲಿ ಅಶಾಂತಿ ಸೃಷ್ಟಿಸುವುದು ಇವರ ಚಾಳಿಯಾಗಿ ಬಿಟ್ಟಿದೆ. ಆರಾಧನಾಲಯಗಳಿಗೆ ನುಸುಳಿ ನಡೆಸುವಂತಹ ಇಂತಹ ಕ್ರೂರ ಕೃತ್ಯಗಳು ಅಪಾಯಕಾರಿ ಬೆಳವಣಿಗೆಯಾಗಿದೆ.

ಆದುದರಿಂದ ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾಗಿ ಹತ್ಯೆಗೈದ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಹನೀಫ್‌ಖಾನ್ ಕೊಡಾಜೆಯವರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News