ಮಡಿಕೇರಿ : ರಿಯಾಝ್ ಮುಸ್ಲಿಯಾರ್ ಹತ್ಯೆಗೆ ನಗರ ಕಾಂಗ್ರೆಸ್ ಖಂಡನೆ

Update: 2017-03-22 12:22 GMT

ಮಡಿಕೇರಿ, ಮಾ.22 :ಕಾಸರಗೋಡಿನ ಚೂರಿ ಗ್ರಾಮದಲ್ಲಿ ನಡೆದ ಮದ್ರಸ ಅಧ್ಯಾಪಕರಾದ ರಿಯಾಝ್ ಮುಸ್ಲಿಯಾರ್ ಅವರ ಹತ್ಯೆ ಪ್ರಕರಣವನ್ನು ಮಡಿಕೇರಿ ನಗರ ಕಾಂಗ್ರೆಸ್ ಘಟಕ ತೀವ್ರವಾಗಿ ಖಂಡಿಸಿದೆ.

ಪತ್ರಿಕಾ ಹೇಳಿಕೆ ನೀಡಿರುವ ಕಾಂಗ್ರೆಸ್ ನಗರಾಧ್ಯಕ್ಷರಾದ ಕೆ.ಯು.ಅಬ್ದುಲ್ ರಜಾಕ್ ಹತ್ಯೆಕೋರರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತರ ಮೇಲೆ ಈ ರೀತಿಯ ದಾಳಿ ಹೆಚ್ಚಾಗುತ್ತಿದೆ ಎಂದು ಅಭಿಪ್ರಾಯಪಟ್ಟಿರುವ ಅವರು ದುಷ್ಕೃತ್ಯದ ಹಿಂದೆ ಇರುವ ದುಷ್ಟ ಶಕ್ತಿಯನ್ನು ತನಿಖೆ ಮೂಲಕ ಬಯಲಿಗೆ ತರಬೇಕೆಂದು ಆಗ್ರಹಿಸಿದ್ದಾರೆ.

ಅಲ್ಪಸಂಖ್ಯಾತರಲ್ಲಿ ಭಯದ ವಾತಾವರಣವನ್ನು ಮೂಡಿಸಿ ಗೊಂದಲ ಸೃಷ್ಟಿಸುವ ಈ ರೀತಿಯ ಕೃತ್ಯಗಳು ಮರುಕಳಿಸದಂತೆ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಭಯ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ಅಬ್ದುಲ್ ರಜಾಕ್ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News