ಗುಂಡ್ಲುಪೇಟೆ : ಪಿಎಸ್‌ಐ ವರ್ಗಾವಣೆ

Update: 2017-03-22 14:05 GMT

ಗುಂಡ್ಲುಪೇಟೆ,ಮಾ.22 :ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ಬಿ.ಎನ್.ಸಂದೀಪ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಆದೇಶಹೊರಡಿಸಲಾಗಿದೆ.

ಸಂದೀಪ್ ಕುಮಾರ್ ಕಳೆದ 6 ವರ್ಷಗಳಿಂದ ಜಿಲ್ಲೆಯ ಕೊಳ್ಳೇಗಾಲ, ಬೇಗೂರು ಹಾಗೂ ಪಟ್ಟಣ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಜನಮೆಚ್ಚುಗೆ ಗಳಿಸಿದ್ದರು. ಸಂಚಾರ ನಿಯಮ ಉಲ್ಲಂಘನೆ ಮಾಡುವವರು ಹಾಗೂ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದವರ ಪಾಲಿಗೆ ದುಸ್ವಪ್ನವಾಗಿದ್ದರು. ಆದರೆ ಪ್ರತಿಭಟನೆಯ ಸಂದರ್ಭದಲ್ಲಿ ಇವರ ಕಾರ್ಯಗಳು ರೈತ ಸಂಘ ಹಾಗೂ ಬಿಜೆಪಿಯವರ ಕೆಂಗಣ್ಣಿಗೆ ಗುರಿಯಾಗಿದ್ದವು.

ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ದೂರು ನೀಡಿದ್ದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಇವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣಾ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗಕ್ಕೆ ವರ್ಗಾಯಿಸಿದೆ. ಇವರ ಕಾರ್ಯವೈಖರಿಗೆ ಮೆಚ್ಚಿದ ಸಿದ್ದರಾಮಯ್ಯನವರೇ ಹೆಚ್ಚಿನ ಆಸಕ್ತಿಯಿಂದ ತಮ್ಮ ತವರು ಕ್ಷೇತ್ರಕ್ಕೆ ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News