ಮಂಗಳೂರು: ವಿಶ್ವ ಜಲ ದಿನಾಚರಣೆ

Update: 2017-03-22 15:04 GMT

ಮಂಗಳೂರು, ಮಾ.22: ಮುಕ್ಕ ಶ್ರೀನಿವಾಸ್ ಸ್ಕೂಲ್ ಆಫ್ ಇಂಜಿನಿಯರಿಂಗ್‌ನ ಸಿವಿಲ್ ಇಂಜಿನಿಯರಿಂಗ್ ವಿಭಾಗವು ಮಂಗಳೂರು ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ ನಗರದ ವಿವಿಧೆಡೆ ವಿಶ್ವ ಜಲ ದಿನವನ್ನು ಆಚರಿಸಿತು.

ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ನೀರಿನ ಉಳಿತಾಯ, ಮಿತ ಬಳಕೆ, ನೀರಿನ ಮೂಲಗಳ ಸಂರಕ್ಷಣೆ ಮತ್ತು ಮಳೆಕೊಯ್ಲಿನ ಮಾಹಿತಿಯನ್ನೊಳಗೊಂಡ ಕರಪತ್ರವನ್ನು ನಗರದ ಸ್ಟೇಟ್‌ಬ್ಯಾಂಕ್ ವೃತ್ತ, ಮನಪಾ ಮತ್ತು ಸುರತ್ಕಲ್ ಬಸ್ ನಿಲ್ದಾಣದ ಬಳಿ ಸಾರ್ವಜನಿಕರಿಗೆ ಹಂಚಿದರು.ಈ ಸಂದರ್ಭ ಹತ್ತು ಸಾವಿರಕ್ಕೂ ಅಧಿಕ ಸಹಿಗಳನ್ನು ಸಂಗ್ರಹಿಸಲಾಯಿತು.

 ಮೇಯರ್ ಕವಿತಾ ಸನಿಲ್, ಎಸಿಪಿ ವೆಲಂಟೈನ್ ಡಿಸೋಜ, ಮತ್ತಿತರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News