ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
Update: 2017-03-22 17:25 GMT
ಶಿವಮೊಗ್ಗ, ಮಾ.22: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪುರುಷರೊಬ್ಬನ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಸಮೀಪದ ಶಿರೂರು ಕಾಡಿನಲ್ಲಿ ವರದಿಯಾಗಿದೆ. ಮೃತ ವ್ಯಕ್ತಿಯ ಹೆಸರು, ವಿಳಾಸ ಸೇರಿದಂತೆ ಯಾವುದೇ ವಿವರಗಳು ಲಭ್ಯವಾಗಿಲ್ಲ. ಶವ ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ ಎನ್ನಲಾಗಿದೆ.
ಸುಮಾರು ಒಂದು ವಾರಗಳ ಹಿಂದೆಯೇ ಮೃತಪಟ್ಟಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಮೇಲ್ನೋಟಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬರುತ್ತಿದ್ದು, ಪೊಲೀಸರ ತನಿಖೆಯ ನಂತರವಷ್ಟೇ ಸಾವಿಗೆ ಸ್ಪಷ್ಟ ಕಾರಣ ತಿಳಿದುಬರಬೇಕಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.