ಇಂದು ಉಡುಪಿ ಜಿಲ್ಲಾ ಯುವ ಸಮಾವೇಶ
Update: 2017-03-24 18:27 GMT
ಉಡುಪಿ, ಮಾ.24: ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಉಡುಪಿ ಹಾಗೂ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ಜಿಲ್ಲಾ ಯುವ ಸಮಾವೇಶ ಮಾ.25ರಂದು ಬೆಳಗ್ಗೆ 9:45ಕ್ಕೆ ತೆಂಕನಿಡಿಯೂರು ಗ್ರಾಪಂ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿರುವರು. ಜಿಪಂ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆ ವಹಿಸಲಿರುವರು. ಮಧ್ಯಾಹ್ನ 1ಗಂಟೆಗೆ ನಡೆಯುವ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮವನ್ನು ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷ ಜಯಕುಮಾರ್ ಬೆಳ್ಕಲೆ ಉದ್ಘಾಟಿಸಲಿರುವರು ಎಂದು ಪ್ರಕಟನೆೆ ತಿಳಿಸಿದೆ.