ಕಸ್ತೂರಿ ರಂಗನ್ ವರದಿ ಹೋರಾಟಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಬೆಂಬಲ

Update: 2017-03-24 18:27 GMT

ಸುಳ್ಯ, ಮಾ.24: ಕಸ್ತೂರಿ ರಂಗನ್ ವರದಿ ಜಾರಿಯ ವಿರುದ್ಧ ನಡೆಯುವ ಹೋರಾಟಕ್ಕೆ ಮತ್ತು ಹೋರಾಟ ನಡೆಸುವ ಸಂಘಟನೆಗಳಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸುದ್ದಿಗೋಷ್ಠಿಯಲ್ಲಿಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವೆಂಕಪ್ಪ ಗೌಡ ತಿಳಿಸಿದ್ದಾರೆ. 

ಕಸ್ತೂರಿ ರಂಗನ್ ವರದಿ ಜಾರಿಗೆ ಬಿಜೆಪಿಯೇ ಹೊಣೆ. ಹಿಂದೆ ಕೇಂದ್ರ ಸರಕಾರ ಹೊರಡಿಸಿದ್ದ ಕರಡು ಮಸೂದೆಗೆ ಅಂದು ರಾಜ್ಯದಲ್ಲಿ ಅಕಾರದಲ್ಲಿದ್ದ ಬಿಜೆಪಿ ಸರಕಾರ ಅಂಗೀಕಾರ ನೀಡಿತ್ತು. ಆದರೆ ಅದೇ ಅವಯಲ್ಲಿ ಕೇರಳದಲ್ಲಿನ ಸರಕಾರ ವರದಿ ತಿರಸ್ಕಾರ ಮಾಡಿತ್ತು. ಇದೀಗ ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಸಿ ಜನರಿಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಪಂ ಸದಸ್ಯ ಗೋಕುಲ್‌ದಾಸ್, ರಾಹುಲ್‌ಗಾಂ ಬ್ರೀಗೆಡ್ ಜಿಲ್ಲಾ ಅಧ್ಯಕ್ಷ ಕೆ.ಕೆ. ಹರಿಪ್ರಸಾದ್, ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News