ಮೇ ದಿನ ಆಚರಣಾ ಸಮಿತಿ ರಚನಾ ಸಭೆ
Update: 2017-03-29 13:19 GMT
ಮಂಗಳೂರು, ಮಾ.29: ಮೇ ದಿನ ಆಚರಣಾ ಸಮಿತಿ ರಚನಾ ಸಭೆಯು ಮಾ.31ರಂದು ಶುಕ್ರವಾರ ಸಂಜೆ 5 ಗಂಟೆಗೆ ಮಂಗಳೂರಿನ ಮಿನಿವಿಧಾನಸೌಧ ಬಳಿಯ ಎನ್ಜಿಓ ಮಿನಿ ಹಾಲ್ನಲ್ಲಿ ನಡೆಯಲಿದೆ.
ಮೇ.1ರಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ನಗರದಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಸಿಐಟಿಯು ರಾಜ್ಯ ಉಪಾಧ್ಯಕ್ಷ ಕಾಂ.ವಸಂತ ಆಚಾರಿ, ಸಿಐಟಿಯು ದ.ಕ. ಜಿಲ್ಲಾಧ್ಯಕ್ಷ ಕಾಂ. ಜೆ. ಬಾಲಕೃಷ್ಣ ಶೆಟ್ಟಿ, ಸಿಐಟಿಯು ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ.ಸುನಿಲ್ ಕುಮಾರ್ ಬಜಾಲ್ ಭಾಗವಹಿಸಲಿದ್ದಾರೆ.
ವಿವಿಧ ಸಂಘಗಳ, ಸಾಮೂಹಿಕ ಸಂಘಟನೆಗಳ ಹಾಗೂ ಮಧ್ಯಮ ವರ್ಗದ ನೌಕರರ ಸಂಘಟನೆಗಳ ಪ್ರಮುಖ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಿಐಟಿಯು ಮಂಗಳೂರು ನಗರ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.